ಕರಾವಳಿ

ಉಡುಪಿ ಸಂತೆಕಟ್ಟೆ : ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗಳು ಮೃತ್ಯು..!

ಉಡುಪಿ: ಉಡುಪಿಯ ಸಂತೆಕಟ್ಟೆಯಲ್ಲಿ‌ ಇಂದು ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕರಾವಳಿ ಕಾವಲು ಪಡೆಯ ಎಎಸ್ ಐ ಹಾಗೂ ಅವರ ಮಗಳು ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಬಸ್ ಮತ್ತು ಸ್ಕೂಟರ್ ನಡುವೆ ಈ ಅಪಘಾತ ‌ಸಂಭವಿಸಿದ್ದು ಗಣೆಶ್ ಪೈ (58) ಮತ್ತು ಮಗಳು ಗಾಯತ್ರಿ ಪೈ ಮೃತ ನತದೃಷ್ಟರು.

ಗಣೇಶ್‌ ಪೈ ಅವರು ಹುಬ್ಬಳಿಯಿಂದ ಆಗಮಿಸಿದ್ದ ತನ್ನ ಮಗಳು ಗಾಯತ್ರಿ ಪೈ ಅವರನ್ನು ಕರೆದುಕೊಂಡ ಹೋಗಲು ಸ್ಕೂಟರ್‌ ನಲ್ಲಿ ಬಂದಿದ್ದು, ಆಕೆಯನ್ನು ಕರೆದುಕೊಂಡು ಸಂತೆಕಟ್ಟೆ ಜಂಕ್ಷನ್‌ ಬಳಿ ರಸ್ತೆ ದಾಟುತ್ತಿದ್ದಾಗ ಕೇರಳದಿಂದ ಕೊಲ್ಲೂರು ಕಡೆಗೆ ಸಾಗುತ್ತಿದ್ದ ಬಸ್ಸು ಡಿಕ್ಕಿಹೊಡೆದಿದ್ದು ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಗಣೇಶ್‌ ಪೈ ಅವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!