ರಾಷ್ಟ್ರೀಯ

ಟ್ರ್ಯಾಕ್ಟರ್‌ ಗೆ ಲಾರಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು, 40 ಮಂದಿಗೆ ಗಂಭೀರ ಗಾಯ

ಸೊಲ್ಲಾಪುರ: ಪಂಡರಾಪುರಕ್ಕೆ ತೆರಳುತ್ತಿದ್ದ ಭಕ್ತರ ಟ್ರ್ಯಾಕ್ಟರ್‌’ಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ 40 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

ಗಾಯಾಳುಗಳಲ್ಲಿ ಆರು ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಸೊಲ್ಲಾಪುರದಿಂದ ಮೊಹೋಲ್ ಮಾರ್ಗವಾಗಿ ಪಂಡರಾಪುರಕ್ಕೆ ತೆರಳುತ್ತಿದ್ದಾಗ ಕೊಂಡಿ – ಕೇಗಾಂವ್ ನಡುವೆ ಇದ್ದಾಗ ಹಿಂಬದಿಯಿಂದ ಬಂದ ಲಾರಿ ಟ್ರ್ಯಾಕ್ಟರ್’​ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಟ್ರ್ಯಾಕ್ಟರ್​’ನಲ್ಲಿದ್ದ ಭಕ್ತರು ಮೇಲಕ್ಕೆ ಹಾರಿ ರಸ್ತೆಯಲ್ಲಿ ಚೆಲ್ಲಾ – ಪಿಲ್ಲಿಯಾಗಿ ಬಿದ್ದಿದ್ದಾರೆ. ಈ ವೇಳೆ ನಾಲ್ವರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸೊಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಗೊಂಡವರೆಲ್ಲರೂ ತುಳಜಾಪುರ ತಾಲೂಕಿನ ಕಡಮವಾಡಿ ನಿವಾಸಿಗಳು. ಈ ಎಲ್ಲ ಭಕ್ತರು ಏಕಾದಶಿ ನಿಮಿತ್ತ ಟ್ರ್ಯಾಕ್ಟರ್‌ನಲ್ಲಿ ಪಂಡರಾಪುರಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು.

ಸ್ಥಳೀಯರೊಂದಿಗೆ ಜೊತೆಗೂಡಿದ ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ಪರಿಹಾರ ಕಾರ್ಯ ಕೈಗೊಂಡರು. ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!