ರಾಜ್ಯ

‘ಕರ್ನಾಟಕದಲ್ಲಿ ಕಡ್ಡಾಯ ಶಿಕ್ಷಣ ನೀತಿಯನ್ನು 12 ನೇ ತರಗತಿವರೆಗೆ ಹೆಚ್ಚಳಕ್ಕೆ ಚಿಂತನೆ’- ಸಚಿವ ನಾಗೇಶ್

ಬೆಂಗಳೂರು : ಕರ್ನಾಟಕದಲ್ಲಿ ಕಡ್ಡಾಯ ಶಿಕ್ಷಣ ನೀತಿಯನ್ನು 12 ನೇ ತರಗತಿವರೆಗೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಆರ್​ಟಿಇ ಪ್ರಕಾರ 8ನೇ ತರಗತಿ ತನಕ ಶಿಕ್ಷಣ ಕಡ್ಡಾಯವನ್ನಾಗಿ ಮಾಡಲಾಗಿದ್ದು, ಇನ್ನು ಮುಂದೆ ಹೊಸ ಆರ್​ಟಿಇ ಅಡಿಯಲ್ಲಿ 12ನೇ ತರಗತಿ ತನಕ ಮಕ್ಕಳು ಶಾಲೆಗೆ ಬರಲೇಬೇಕು ಎಂಬ ನಿಯಮವನ್ನ ತರಬೇಕೆಂಬ ಯೋಚನೆ ಇದ್ದು, ಜೊತೆಗೆ 8ನೇ ತರಗತಿ ನಂತರದ ಮಕ್ಕಳಿಗೂ ಕಡ್ಡಾಯ ಶಿಕ್ಷಣ ಮಾಡುವ ಬಗ್ಗೆ ಚಿಂತನೆ ಇದೆ ಎಂದರು.

ಇನ್ನು ಹಿಜಾಬ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ಹಿಜಾಬ್ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಹೈಕೋರ್ಟ್​ನ ತೀರ್ಪನ್ನು ಪ್ರತಿಯೊಬ್ಬ ಪ್ರಜೆ ಒಪ್ಪಿಕೊಳ್ಳಬೇಕು. ಸದ್ಯದಲ್ಲೇ ಅವರ ಮನವೊಲಿಸಿ ಶಾಲೆಗೆ ಬರುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!