ಕರಾವಳಿ

ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಕರೆಂಟ್ ಶಾಕ್ !! | ಓರ್ವ ಸಾವು, ಇನ್ನೋರ್ವನಿಗೆ ಗಂಭೀರ ಗಾಯ

ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಪಡುಬಿದ್ರಿಯ ಬಾಲಗಣಪತಿ ದೇವಸ್ಥಾನದ ರಸ್ತೆಯಲ್ಲಿರುವ ಗಿರಿ ಚಿಕನ್ ಸೆಂಟರ್‌ನಲ್ಲಿ ನಡೆದಿದೆ.

ಮೃತರನ್ನು ಕಂಚಿನಡ್ಕ ನಿವಾಸಿ ಅಬ್ದುಲ್ ಬಶೀರ್ (45) ಎಂದು ಗುರುತಿಸಲಾಗಿದೆ.

ಮೃತರ ಜೊತೆಗೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿ ಮೊಹಮ್ಮದ್ ಖುರ್ಷಿದ್ ಶೇಕ್ ಕೂಡ ಈ ಅವಘಡದಲ್ಲಿ ಗಾಯಗೊಂಡಿದ್ದಾರೆ. ಇಬ್ಬರನ್ನೂ ಪಡುಬಿದ್ರಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮೊಹಮ್ಮದ್ ಖುರ್ಷಿದ್ ಶೇಕ್ ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಶೀರ್‌ನ ಸ್ಥಿತಿ ಗಂಭೀರವಾದ ಕಾರಣ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿನ ವೈದ್ಯರು ಬಶೀರ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅಬ್ದುಲ್ ಬಶೀರ್ ಅವರು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!