ಕರಾವಳಿ
ಮಂಗಳೂರು: ದೋಣಿ ಮಗುಚಿ ಬಿದ್ದು ಮೀನುಗಾರ ಸಾವು

ಮಂಗಳೂರು: ರವಿವಾರ ಹರೇಕಳ-ಅಡ್ಯಾರ್ ಅಣೆಕಟ್ಟು ಬಳಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಅಡ್ಯಾರ್ ಕಟ್ಟೆ ನಿವಾಸಿ ರಾಬರ್ಟ್ ಎಂದು ಗುರುತಿಸಲಾಗಿದೆ.
ರಾಬರ್ಟ್ ಅವರು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದದನ್ನು ಸ್ಥಳೀಯರು ಗಮನಿಸಿ ತಕ್ಷಣ ಅವರನ್ನು ರಕ್ಷಿಸಿದರು.ತೀವ್ರ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಬರ್ಟ್ ಮೃತಪಟ್ಟರು ಎಂದು ಪ್ರಕರಣ ದಾಖಲಿಸಿದೆ ಎಂದು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.