ರಾಜ್ಯ

ಲಾರಿಗಳ ನಡುವೆ ಡಿಕ್ಕಿ: ಚಾಲಕ ಸಜೀವ ದಹನ

ಬೆಂಗಳೂರು: ಎರಡು ಸಿಮೆಂಟ್ ಲಾರಿಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಹೊತ್ತಿಕೊಂಡ ಬೆಂಕಿಯಲ್ಲಿ ಚಾಲಕನೊಬ್ಬ ಸಜೀವ ದಹನಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ‌ ರಾಷ್ಟ್ರೀಯ ಹೆದ್ದಾರಿ 7ರ ಭುಕ್ತಿ ಡಾಬಾದ ಮುಂದೆ ಶುಕ್ರವಾರ ನಡೆದಿದೆ.

ಎರಡೂ ಲಾರಿಗಳು ಚಿಕ್ಕಬಳ್ಳಾಪುರದಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದವು. ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪ ಒಂದು ಲಾರಿಯನ್ನು ಮತ್ತೊಂದು ಲಾರಿ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಲಾರಿಯೊಂದು ಹೊತ್ತಿ ಉರಿದಿದೆ. ಚಾಲಕನ‌ ಸೀಟ್ ​ನಲ್ಲೇ ಮೃತದೇಹ ಸಿಲುಕಿದ್ದು, ಅಪಘಾತದ ರಭಸಕ್ಕೆ ಎರಡೂ ಲಾರಿಗಳು ನಜ್ಜುಗುಜ್ಜಾಗಿವೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!