ರಾಜ್ಯ

ಜೂನ್ 16 17 18 ರಂದು ಸಿಇಟಿ ಪರೀಕ್ಷೆ: ಡಾ.ಸಿ.ಎನ್. ಅಶ್ವಥ್ ನಾರಾಯಣ

ಬೆಂಗಳೂರು : ವೃತ್ತಿ ಶಿಕ್ಷಣಕ್ಕೆ ಪ್ರವೇಶ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಸೋಮವಾರ ಮಾತನಾಡಿದ ಅವರು ಬೇರೆ ಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತು ಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಇದರಂತೆ ಜೂನ್ 16ರಂದು ಬೆಳಿಗ್ಗೆ ಜೀವಶಾಸ್ತ್ರ ಮಧ್ಯಾಹ್ನ ಗಣಿತ 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ  ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಇದರಂತೆ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 5 ರಿಂದ  20ರವರೆಗೆ ಸಿಇಟಿಯಲ್ಲಿ ತಮ್ಮ ಹೆಸರು ನೊಂದಾಯಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ನಿಗದಿತ ಶುಲ್ಕ ಸಲ್ಲಿಸಲು ಏಪ್ರಿಲ್ 22 ರವರೆಗೆ ಅವಕಾಶವಿದೆ.

ಶ್ಶುಲಕ ಪಾವತಿಸಿದ ನಂತರ ತಮ್ಮ ಅರ್ಜಿಯಲ್ಲಿ ಏನಾದರೂ ಮಾಹಿತಿಯನ್ನು ಪರಿಷ್ಕರಿಸುವುದು ದಿದ್ದರೆ ಅಂತವರಿಗೆ ಮೇ 2ರಿಂದ 6 ರವರೆಗೆ ಕಾಲ ಅವಕಾಶ ಇರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಸಚಿವರು ವಿವರಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!