ಕರಾವಳಿ

ಯುವಕನ ಅಪಹರಿಸಿ ಲೈಂಗಿಕ ದೌರ್ಜನ್ಯ| ಉಡುಪಿ ಮೂಲದ‌ ನಟೋರಿಯಸ್ ಸುಲಿಗೆಕೋರರಿಗೆ ಗುಂಡೇಟು

ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಅಪಹರಿಸಿ ಹಣ ದರೋಡೆ ಮಾಡಿದಲ್ಲದೆ, ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಉಡುಪಿ ಮೂಲದ ಇಬ್ಬರು ನಟೋರಿಯಸ್ ಸುಲಿಗೆಕೋರರಿಗೆ ಕೊತ್ತನೂರು ಠಾಣೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಉಡುಪಿಯ ಕಾಪು ತಾಲೂಕಿನ ಮೊಹಮ್ಮದ್ ಆಶೀಕ್ ಮತ್ತು ಕುಂದಾಪುರ ತಾಲೂಕಿನ ಇಸಾಕ್ ಎಂಬವರಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಿಂದ ಹತ್ತು ಮೊಬೈಲ್‌ಗಳು, ಒಂದು ಕಾರು ವಶಕ್ಕೆಪಡೆಯಲಾಗಿದೆ.

ಮಾ.26 ರಂದು ಮುಂಜಾನೆ 5 ಗಂಟೆ ಸುಮಾರಿಗೆ ನಂಬರ್ ಪ್ಲೇಟ್ ಇಲ್ಲದ ಮಾರುತಿ ರಿಟ್ಜ್ ಕಾರಿನಲ್ಲಿ ಬಂದ ನಾಲ್ವರು ಆರೋಪಿಗಳು, ಮತ್ತೊಂದು ದೇವಸ್ಥಾನದಿಂದ ಮನೆಗೆ ಹೋಗುತ್ತಿದ್ದ ಕಾರಿನಲ್ಲಿ ಯುವಕನನ್ನು ಹಿಂಬಾಲಿಸಿ, ಕಾರು ಅಡ್ಡಗಟ್ಟಿದ್ದಾರೆ. ಬಳಿಕ ಮಾರಕಾಸ್ತ್ರ ತೋರಿಸಿ ಆತನ ಕಾರಿನಲ್ಲಿ ಅಪಹರಿಸಿದ್ದಾರೆ. ಬಳಿಕ ಯುವಕನ ಬಳಿಯಿದ್ದ ಚಿನ್ನ ಉಂಗುರ ಕಸಿದುಕೊಂಡಿದ್ದಾರೆ. ಬಳಿಕ 50 ಸಾವಿರ ರೂ. ನಗದು ಕೊಡಬೇಕು ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, ಬಲವಂತವಾಗಿ ಎಟಿಎಂ ಕಾರ್ಡ್ ಪಡೆದುಕೊಂಡು, ಎಟಿಎಂ ಕೇಂದ್ರಗಳಲ್ಲಿ ಹಣ ಡ್ರಾ ಮಾಡಿಕೊಂಡಿದ್ದಾರೆ. ನಂತರ ಬೆಳ್ಳಂದೂರು, ವೈಟ್‌ಫೀಲ್ಡ್‌ ಕಡೆಗೆ ಕರೆದೊಯ್ದು ತಾವು ಕೇಳಿದಷ್ಟು ಹಣ ಕೊಡಬೇಕು. ಇಲ್ಲವಾದರೆ ಲೈಂಗಿಕವಾಗಿ ಸಹಕರಿಸಬೇಕೆಂದಿದ್ದರು. ಬಳಿಕ ಯುವಕನಿಂದ ಒಂದಿಷ್ಟು ಹಣ ಕಸಿದುಕೊಂಡು, ಬಳಿಕ ಲೈಂಗಿಕ ದೌರ್ಜನ್ಯ ಎಸಗಿ, ಮಾರ್ಗ ಮಧ್ಯೆ ಬಿಟ್ಟು ಹೋಗಿದ್ದರು.

ಆರೋಪಿಗಳು ಬೆಂಗಳೂರಿನಲ್ಲಿ ಕೃತ್ಯ ಎಸಗಿದ ಬಳಿಕ ದಾವಣಗೆರೆಯಲ್ಲಿ ಸುಲಿಗೆ ಮಾಡಿದ್ದರು. ಮಂಗಳವಾರ ಮುಂಜಾನೆ ರಿಟ್ಜ್ ಕಾರಿನಲ್ಲಿ ಜಕ್ಕೂರು ಬಳಿ ಓಡಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕಿತ್ತು. ಈ ಮಾಹಿತಿ ಆಧರಿಸಿ ಆರೋಪಿಗಳನ್ನು ಹಿಡಿಯಲು ಹೋದಾಗ ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಡ್ರ್ಯಾಗರ್ ನಿಂದ ಪಿಎಸ್‌ಐ ಉಮೇಶ್ ಮೇಲೆ ಹಲ್ಲೆ ನಡೆಸಿದ್ದರು. ಆಗ ಪಿಐ ಚನ್ನೇಶ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದರೂ ಮತ್ತೊಮ್ಮೆ ಹಲ್ಲೆಗೆ ಮುಂದಾದಾಗ ಆರೋಪಿಗಳ ಕಾಲುಗಳಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!