ರಾಜ್ಯ

ಇಂದಿನಿಂದ ಮೇ19ರವರೆಗೆ ಮದ್ಯ ಮಾರಾಟಗಾರರ ಮುಷ್ಕರ

ಇಂದಿನಿಂದ ಮೇ 19ರವರೆಗೆ ಮದ್ಯ ಮಾರಾಟಗಾರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಕೆಎಸ್‌ಪಿಸಿಎಲ್ ಹೊಸ ನೀತಿಯಿಂದ ಮದ್ಯ ಮಾರಾಟಗಾರರಿಗೆ ಸಮಸ್ಯೆ ಎದುರಾಗಿದೆ. ಮದ್ಯ ಖರೀದಿ ಮಾಡುವ ವ್ಯವಸ್ಥೆ ಬದಲಾಗಿರುವುದರಿಂದ ನಮಗೆ ಬಹಳ ತೊಂದರೆಯಾಗಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಗಂಭೀರ
ಆರೋಪ ಮಾಡಿದೆ.

ಕೆಎಸ್‌ಪಿಸಿಎಲ್‌ನಿಂದ ಮ್ಯಾನುವಲ್ ಮೆತಡ್ ಮೂಲಕ ಇಷ್ಟು ವರ್ಷ ವೈನ್ ಮರ್ಚೆಂಟ್ಸ್ ಬಾರ್ ಮಾಲಿಕರು ಖರೀದಿ ಮಾಡುತ್ತಿದ್ದರು. ಈಗ ವೆಬ್‌ಸೈಟ್ ಓಪನ್ ಮಾಡಿ ಮಾಲೀಕರು ಲಾಗಿನ್ ಆಗಿ ತಮಗೆ ಬೇಕಾದ ಮದ್ಯಗಳನ್ನು ಆಯ್ಕೆ ಮಾಡಿ, ಆನ್‌ಲೈನ್ ಮೂಲಕ ಹಣ ರವಾನೆ ಮಾಡಬೇಕು. ರಾತ್ರಿ 9 ರಿಂದ ಬೆಳಗ್ಗೆ ಒಂಬತ್ತರವರೆಗೆ ಲಿಸ್ಟ್
ಫಿಲ್ ಮಾಡಿ, ಗೋದಾಮಿನಲ್ಲಿ ದಾಸ್ತಾನಿರುವ ಮದ್ಯಗಳನ್ನು ಮಾತ್ರ ಪಡೆದುಕೊಳ್ಳಬೇಕು. ಈ ನೂತನ ಪದ್ದತಿ ಬಾರ್ ಮತ್ತು ವೈನ್ ವ್ಯಾಪಾರಿಗಳಿಗೆ ಆತಂಕ ಸೃಷ್ಟಿಸಿದೆ.

ಗ್ರಾಹಕರಿಂದ ಬೇಡಿಕೆ ಇರುವ ಮದ್ಯ ಸಿಗುವುದಿಲ್ಲ. ಶ್ರೀಮಂತ ಬಾರ್ ಮಾಲೀಕರು ವೈನ್ ಶಾಪ್ ಮಾಲೀಕರು ಬೇಕಾದಷ್ಟು ಮದ್ಯವನ್ನು ಖರೀದಿ ಮಾಡುತ್ತಾರೆ. ಸಣ್ಣ ಉದ್ದಿಮೆದಾರರಿಗೆ
ಇದರಿಂದ ಬಹಳ ಸಮಸ್ಯೆಯಾಗಿದೆ. ರಾಜ್ಯದಲ್ಲಿ
ಕಾರ್ಯಾಚರಿಸುತ್ತಿರುವ ಶೇ.80 ಜನಕ್ಕೆ ಕಳೆದ ಒಂದು ತಿಂಗಳಿನಿಂದ ಸಮಸ್ಯೆಯಾಗಿದೆ. ಈ ಸಮಸ್ಯೆ ಬಗ್ಗೆ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲು ಕೆಎಸ್‌ಪಿಸಿಎಲ್ ಎಂಡಿ ತಯಾರಿಲ್ಲ.

ಈ ಬಗ್ಗೆ ಸಭೆ ಮಾಡಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿರುವ ಆಯುಕ್ತರ ಒಂದು ತಿಂಗಳು ಕಳೆದರೂ ಇನ್ನೂ ಆಗಿಲ್ಲ ಅಂತ ಆಕ್ರೋಶ ಹೊರ ಹಾಕದ್ದಾರೆ.

ಒಂದೊಂದು ದಿನ ಒಂದೊಂದು ಜಿಲ್ಲೆಯಲ್ಲಿ ಮಧ್ಯ ಮಾರಾಟಗಾರರು ಪ್ರತಿಭಟನೆಗೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ‌.

Related Articles

Leave a Reply

Your email address will not be published. Required fields are marked *

Back to top button
error: Content is protected !!