ಕರಾವಳಿ
ಉಡುಪಿ – ಕಳಪೆ ಕಾಂಕ್ರೀಟ್ ಕಾಮಗಾರಿ ; ಹೊಳೆಗೆ ಬಿದ್ದ ಟಿಪ್ಪರ್

ಉಡುಪಿ : ರಸ್ತೆ ಕಳಪೆ ಕಾಮಗಾರಿಯಿಂದಾಗಿ ಕಾಂಕ್ರಿಟ್ ಕುಸಿದ ಪರಿಣಾಮ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಪಕ್ಕದ ಹೊಳೆಗೆ ಬಿದ್ದ ಘಟನೆ ಉಡುಪಿಯ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಮಣ್ಣು ತುಂಬಿಕೊಂಡು ಬರುತ್ತಿದ್ದ ಲಾರಿ ಭಾರಕ್ಕೆ ಕಾಂಕ್ರೀಟ್ ರಸ್ತೆ ಕುಸಿದಿದೆ.
ರಸ್ತೆಯಲ್ಲಿ ಬಿರುಕು ಬಿಟ್ಟು ಸಂಪೂರ್ಣ ಕುಸಿದ ಪರಿಣಾಮ ಟಿಪ್ಪರ್ ಸಮೀಪದ ಕಲ್ಮಾಡಿ ಹೊಳೆಗೆ ಉರುಳಿ ಬಿದ್ದಿದೆ.
ಅಪಘಾತದಲ್ಲಿ ಟೆಂಪೋ ಚಾಲಕ ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಕಾಂಕ್ರೀಟ್ ಅಡಿಭಾಗದಲ್ಲಿ ಸರಿಯಾಗಿ ಮಣ್ಣು ತುಂಬದ ಪರಿಣಾಮ ರಸ್ತೆ ಕುಸಿದು ಹೋಗಿದೆ ರಸ್ತೆ ಕಳಪೆ ಕಾಮಗಾರಿಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.