ಕರಾವಳಿ

ಕೊರಗ ಸಮುದಾಯದ ಫಲಾನುಭವಿಗೆ ಉಡುಪಿ ನಗರ ಬಿಜೆಪಿ ನಿರ್ಮಿಸಿದ ” ದೀನ್ ದಯಾಳ್ ನಿವಾಸ” ಹಸ್ತಾಂತರ

ಮಣಿಪಾಲದ ನೆಹರೂ ನಗರದ ಕೊರಗ ಸಮುದಾಯದ ಫಲಾನುಭವಿಗೆ ಉಡುಪಿ ನಗರ ಬಿಜೆಪಿ ವತಿಯಿಂದ ನಿರ್ಮಿಸಲಾದ ಮನೆ “ದೀನ್ ದಯಾಳ್ ನಿವಾಸ” ಇದನ್ನು ಇಂದು ದಿನಾಂಕ 10-05-2022 ರಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರು, ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಫಲಾನುಭವಿಗೆ ಹಸ್ತಾಂತರಿಸಿದರು. ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!