ರಾಜ್ಯ

ಮಂಗಳೂರು: ಎಸ್‌ಡಿಎಂ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಡಾ.ಬಿ. ಯಶೋವರ್ಮ ಸಿಂಗಪುರದಲ್ಲಿ ನಿಧನ

ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ
ಕಾಲೇಜು ಉಜಿರೆಯ ಮಾಜಿ ಪ್ರಾಂಶುಪಾಲ ಡಾ.ಬಿ
ಯಶೋವರ್ಮ (66) ರವಿವಾರ ಮಧ್ಯರಾತ್ರಿ
ಸಿಂಗಾಪುರದಲ್ಲಿ ವಿಧಿವಶರಾಗಿದ್ದಾರೆ.

ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ
ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ
ಪಡೆಯುತ್ತಿದ್ದರು. ಯಶೋವರ್ಮ ಅವರು ಉಜಿರೆಯ ಶ್ರೀ
ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ
ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಎಸ್‌ಡಿಎಂ ಎಜುಕೇಶನ್ ಸೊಸೈಟಿ
ಕಾರ್ಯದರ್ಶಿಯಾಗಿದ್ದರು. ಡಾ.ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ
ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ
ಸಹೋದರ.

Related Articles

Leave a Reply

Your email address will not be published. Required fields are marked *

Back to top button
error: Content is protected !!