ಗೋಶಾಲೆಗಳಿಗೆ ಆರ್ಥಿಕ ಸಹಕಾರದ ಮೂಲಕ ಗೋರಕ್ಷಣೆಗೆ ಶ್ಲಾಘನೀಯ : ಪೇಜಾವರ ಶ್ರೀ

ಮೀನುಗಾರರ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ
ಕಾರ್ಯನಿರ್ವಹಿಸುತ್ತಿರುವ ಯಶ್ ಪಾಲ್ ಸುವರ್ಣ ನೇತೃತ್ವದ ಮೀನು ಮಾರಾಟ ಫೆಡರೇಷನ್ ನೂತನ ಪ್ರಧಾನ ಕಚೇರಿಯ ಶಿಲಾನ್ಯಾಸ ಸಂದರ್ಭದಲ್ಲಿ ನೀಲಾವರ ಗೋ ಶಾಲೆಗೆ ಧನಸಹಾಯ ನೀಡುವ ಮೂಲಕ
ಗೋರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸಿರುವುದು ಶ್ಲಾಘನೀಯ ಎಂದು ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ
ಮೀನು ಮಾರಾಟ ಫೆಡರೇಷನ್ ಇದರ ನೂತನ
ಪ್ರಧಾನ ಕಚೇರಿ ಸಂಕೀರ್ಣ ಮತ್ತ್ವ ಸಂಪದ
ಶಿಲಾನ್ಯಾಸ ನೆರವೇರಿಸಿ ಆಶೀರ್ವಚಿಸಿದರು ಶಿಲಾನ್ಯಾಸ ನೆರವೇರಿಸಿ ಆಶೀರ್ವಚಿಸಿದರು.
ಸಮಾರಂಭದಲ್ಲಿ ಮೀನು ಮಾರಾಟ
ಫೆಡರೇಷನ್ ವತಿಯಿಂದ ಪೇಜಾವರ ಶ್ರೀ ಪಾದರ
ನೀಲಾವರ ಗೋಶಾಲೆಯ ಶ್ರೀ ಗೋವರ್ಧನ ಗಿರಿ
ಟ್ರಸ್ಟಿಗೆ ರೂ. 2.50 ಲಕ್ಷ ಮೊತ್ತದ ಚೆಕ್ಕನ್ನು ನಾಡೋಜ ಡಾ ಜಿ. ಶಂಕರ್ ರವರು ಸ್ವಾಮೀಜಿಯವರಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ, ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ಡಾ ವೈ ಭರತ್ ಶೆಟ್ಟಿ, ಶ್ರೀ ಉಮಾನಾಥ ಕೋಟ್ಯಾನ್, ಶ್ರೀ ಲಾಲಾಜಿ ಆರ್
ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ
ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ ಕೋಟ್ಯಾನ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.