ರಾಜ್ಯ
ಕೈ ನೋವೆಂದು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ ಸಾವು
ವೈದ್ಯರ ನಿರ್ಲಕ್ಷವೇ ಸಾವಿಗೆ ಕಾರಣ ಪೋಷಕರಿಂದ ಗಂಭೀರ ಆರೋಪ
ಬೆಂಗಳೂರು: ಬಿದ್ದು ಕೈಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಶಸ್ತ್ರಚಿಕಿತ್ಸೆಗೆ ಒಳಗಾದ ಕೆಲವೇ ಗಂಟೆಗಳಲ್ಲಿ ಮೃತಪಟ್ಟ ಘಟನೆ
ಮಾರತಹಳ್ಳಿಯಲ್ಲಿ ನಡೆದಿರುವುದು ತಿಳಿದುಬಂದಿದೆ.
ಯುವತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯಕಾರಣ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಬಾಗೇಪಲ್ಲಿ ಮೂಲದ ತೇಜಸ್ವಿನಿ (21) ಮೃತಪಟ್ಟವರು. ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಇವರು ಪಿ.ಜಿ.ಯೊಂದರಲ್ಲಿದ್ದು ಕಾಲೇಜಿಗೆ ಹೋಗುತ್ತಿದ್ದರು. ಇವರು ರವಿವಾರ ಬಾತ್ ರೂಮ್ ನಲ್ಲಿ ಬಿದ್ದು ಗಾಯಗೊಂಡಿದ್ದರು.
ಚಿಕಿತ್ಸೆಗಾಗಿ ಅವರನ್ನು ಮಾರತಹಳ್ಳಿಯ ಜೀವಿಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೇಜಸ್ವಿನಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿತ್ತು. ಶಸ್ತ್ರಚಿಕಿತ್ಸೆ ನಡೆದ ಕೆಲವೇ ಗಂಟೆಗಳಲ್ಲಿ ಅವರು ಸಾವನ್ನಪ್ಪಿದ್ದಾರೆ. ತೇಜಸ್ವಿನಿ ಸಾವಿಗೆ ವೈದ್ಯರ ನಿರ್ಲಕ್ಷವೆ ಕಾರಣ ಎಂದು ಅವರ ಪೋಷಕರು ಆರೋಪಿಸಿದ್ದಾರೆ.