ಕರಾವಳಿ
ಹಿರಿಯಡ್ಕ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಹಿರಿಯಡ್ಕ: ವೈಯಕ್ತಿಕ ಕಾರಣಗಳಿಂದ ಜೀವನದಲ್ಲಿ
ಮನನೊಂದು ಹರಿಕಂಡಿಗೆಯ ಕೃಷ್ಣ ಪೂಜಾರಿ ಎಂಬವರು ನೇಣು ಬಿಗಿದು ಆತ್ಮಹತ್ಯೆ
ಮಾಡಿಕೊಂಡಿದ್ದಾರೆ.
ಕೃಷ್ಣ ಪೂಜಾರಿ (50) ರವರು ವಿಪರೀತ ಮದ್ಯ ಸೇವನೆಯ ಅಭ್ಯಾಸವನ್ನು ಹೊಂದಿದ್ದರು. ಇವರು
ವೈಯಕ್ತಿಕ ಕಾರಣಗಳಿಂದ ಜೀವನದಲ್ಲಿ ಮನನೊಂದು ಜಿಗುಪ್ಪೆಗೊಂಡು ನಿನ್ನೆ ಬೆಳಿಗ್ಗೆ ತಮ್ಮ ವಾಸದ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ
ಮೃತರ ಪತ್ನಿ ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.