ಕರಾವಳಿ

ಓವರ್‌ಟೇಕ್‌ ಮಾಡುವ ವೇಳೆ ಬೈಕ್‌ ಸ್ಕಿಡ್‌ ಆಗಿ ಸವಾರ ಸಾವು.

ಮಂಗಳೂರು : ನಗರದಲ್ಲಿ ಯುವಕನೊಬ್ಬ ಓವರ್‌ಟೇಕ್‌ ಮಾಡುವ ವೇಳೆ ಬೈಕ್‌ ಸ್ಕಿಡ್‌ ಆಗಿ ಸವಾರ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗುರುಪುರ ಕೈಕಂಬದ ಸಮೀಪ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮೂಡು ಬಿದಿರೆಯಿಂದ ಕೈಕಂಬದ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ ಕೆರೆಕಾಡಿನ ಪ್ರವೀಣ್‌ (36) ಬೈಕ್ ಅನ್ನು ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗುರುಪುರ ಕೈಕಂಬದ ಸಮೀಪ ಓವರ್‌ಟೇಕ್‌ ಮಾಡುವ ವೇಳೆ ಬೈಕ್‌ ಸ್ಕಿಡ್‌ ಆಗಿದೆ. ಈ ಸಂದರ್ಭ ಕಾರಿನಡಿಗೆ ಬಿದ್ದ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿದೆ.

ಮಳೆ ಬಂದ ಕಾರಣ ಹೆದ್ದಾರಿ ಜಾರುತ್ತಿದ್ದು ಪ್ರವೀಣ್‌ ಅವರು ಹೆಲ್ಮೆಟ್‌ ಹಾಕದೇ ಇರುವುದು ಸಾವಿಗೆ ಕಾರಣವಾಗಿದೆ. ಅಪಘಾತದ ವೀಡಿಯೋ ವೈರಲ್‌ ಆಗಿದೆ.

ಕಳೆದ ವಾರ ಇದೇ ಜಾಗದಲ್ಲಿ ಓವರ್‌ಟೇಕ್‌ ಮಾಡುವ ವೇಳೆ ಅಪಘಾತವಾಗಿದ್ದು ಅದರಲ್ಲಿ ಬೈಕ್ ಕಾರಿಗೆ ಢಿಕ್ಕಿ ಹೊಡೆದಿತ್ತು. ಬೈಕ್‌ ಸವಾರ ಹೆಲ್ಮೆಟ್‌ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದ.

ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!