ಕರಾವಳಿ

ಇರಾ- ಉಚಿತ ವೈದ್ಯಕೀಯ ಶಿಬಿರ

ಬಂಟ್ವಾಳ: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬಾ ಟ್ರಸ್ಟ್ (ರಿ.) ಗಾಂಧಿನಗರ, ಮಂಗಳೂರು ಇವರ ಆಶ್ರಯದಲ್ಲಿ ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ (ರಿ.) ಕುಂಡಾವು, ಇರಾ ಗ್ರಾಮ ಪಂಚಾಯತ್, ಯುವಕ ಮಂಡಲ(ರಿ.) ಇರಾ ಇವರ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಹಾಗೂ ದಂತ, ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಆದಿತ್ಯವಾರ ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇರಾ
ಇಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಇರಾ ಶ್ರೀ ಸೋಮನಾಥೇಶ್ವರ
ದೇವಸ್ಥಾನದ ಮೊತ್ತೇಸರರಾದ ವೈ.ಬಿ ಸುಂದರ್, ಇರಾ ಗ್ರಾಮ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರೂ, ಹಾಲಿ
ಸದಸ್ಯರಾಗಿರುವ ಅಬ್ದುಲ್ ರಝಾಕ್ ಕುಕ್ಕಾಜೆ ಮಾತನಾಡಿ, ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ಹಾಗೂ ಯುವಕ ಮಂಡಲದbಕಾರ್ಯಕ್ರಮಗಳನ್ನು ಶ್ಲಾಘಿಸಿದರು.

ಸತ್ಯಸಾಯಿ ಸೇವಾ ಸಂಸ್ಥೆಯ ರಾಜ್ಯ ಪದಾಧಿಕಾರಿಗಳಾದ
ಚಂದ್ರಶೇಖರ್ ನಾಯಕ್, ನಿರಂಜನ್ ಹೆಬ್ಬಾರ್, ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಜಯರಾಮ್ ಪೂಜಾರಿ ಸೂತ್ರಬೈಲು, ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಮೊಯ್ದಿನ್ ಕುಂಞ, ಇರಾ ಶಾಲೆಯ ಮುಖ್ಯ ಶಿಕ್ಷಕಿ ಸೋನಿತ, ಅಧ್ಯಾಪಕ ಮಹಮ್ಮದ್, ಯುವಕ ಮಂಡಲ(ರಿ.) ಇರಾ ಇದರ ಅಧ್ಯಕ್ಷರಾದ ಅಶ್ವಿತ್ ಕೊಟ್ಟಾರಿ ಇರಾ, ಯನೆಪೊಯ ವೈದ್ಯಕೀಯ ಸಂಸ್ಥೆಯ ಡಾ. ಅಫ್ರೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸತ್ಯಸಾಯಿ ಸೇವಾ ಟ್ರಸ್ಟ್ ನ ಸದಸ್ಯರಾದ ದೇವಾನಂದ ರೈ ಕಾರ್ಯಕ್ರಮ ನಿರೂಪಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!