ಕರಾವಳಿ

ಉದ್ಯಾವರ: ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮಹಿಳೆ ಮೃತ್ಯು

ಉದ್ಯಾವರ: ಉದ್ಯಾವರದ ಗುಡ್ಡೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಗೆ ಕಾಯುತ್ತಿದ್ದ ಬ್ಯಾಂಕ್ ಉದ್ಯೋಗಿ ಮಹಿಳೆಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಿನ್ನೆ ಬೆಳಿಗ್ಗೆ ನಡೆದಿದೆ.

ಸ್ಥಳೀಯ ನಿವಾಸಿ ವಸಂತಿ (55) ಮೃತಪಟ್ಟವರು.
ಇವರು ಕಂಟ್ಟಿಂಗೇರಿಯಲ್ಲಿರುವ ಯೂನಿಯನ್ ಬ್ಯಾಂಕ್ ನ ಉದ್ಯೋಗಿಯಾಗಿದ್ದು ನಿನ್ನೆ ಬೆಳಿಗ್ಗೆ
ಬ್ಯಾಂಕ್ ಗೆ ಹೋಗಲು ಉದ್ಯಾವರದ ಗುಡ್ಡೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಗೆ ಕಾಯುತ್ತಿದ್ದಾಗ
ಕುಸಿದು ಬಿದ್ದಿದ್ದರು.

ತಕ್ಷಣ ಸ್ಥಳೀಯ ರಿಕ್ಷಾದವರು ಅವರನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು
ಹೋಗಿದ್ದು, ಅಲ್ಲಿ ವಸಂತಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ
ತಿಳಿಸಿದ್ದಾರೆ.

ವಸಂತಿ ಅವರಿಗೆ ಒಂದೂವರೆ ವರ್ಷದ ಮೊದಲು ಎದೆ ಬಡಿತದ ಸಮಸ್ಯೆ ಕಾಣಿಸಿಕೊಂಡಿದ್ದು ಈ ಬಗ್ಗೆ
ಉಡುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದ್ದರಿಂದ ವಸಂತಿಯವರು ಹೃದಯಘಾತದಿಂದ
ಮೃತಪಟ್ಟಿರಬಹುದು ಎಂಬೂದಾಗಿ ಮೃತರ ಮಗ ಹೇಮಂತ್ ಕುಮಾರ್ ಅವರು ನೀಡಿದ ದೂರಿನಂತೆ
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!