ಕರಾವಳಿ
ಬೈಂದೂರು: ಹೇನಬೇರಿನ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿ – ಕಾರು ಪತ್ತೆ.!
ಬೈಂದೂರು : ಸುಟ್ಟ ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ವ್ಯಕ್ತಿಯ ಮೃತ ದೇಹ ಇಲ್ಲಿನ ಹೇನಬೇರಿನ ನಿರ್ಜನ ಪ್ರದೇಶದಲ್ಲಿ ಬುಧವಾರ ಮುಂಜಾನೆ ಪತ್ತೆಯಾಗಿದೆ. ಕಾರು ಕೂಡ ಸಂಪೂರ್ಣ ಸುಟ್ಟುಹೋಗಿದ್ದು ಅನುಮಾನಸ್ಪದ
ರೀತಿಯಲ್ಲಿ ಕಂಡುಬಂದಿದೆ.
ಫೋರ್ಡ್ ಐಕಾನ್ ಕಾರಿನ ಹಿಂದಿನ ಸೀಟಿನಲ್ಲಿ ವ್ಯಕ್ತಿ ಕರಕಲಾದ ಸ್ಥಿತಿಯಲ್ಲಿ ಕಂಡುಬಂದಿದ್ದು ಕಾರಿನ ಬಳಿ ಪೆಟ್ರೋಲ್ ತುಂಬಿಸಿಕೊಂಡು ಬಂದ ಕ್ಯಾನ್ ಪತ್ತೆಯಾಗಿದೆ.
ಕಾರಿನ ನೊಂದಣಿ ಸಂಖ್ಯೆಯೂ ಸಂಪೂರ್ಣ ಸುಟ್ಟು ಹೋದ ಕಾರಣ ಮೃತ ವ್ಯಕ್ತಿ ಯಾರು ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಾಗಿದೆ.
ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆಯಿದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಫೋರೆನ್ಸಿಕ್ ತಜ್ಞರು ಆಗಮಿಸಿದ ಬಳಿಕವಷ್ಟೇ ಹೆಚ್ಚಿನ ಮಾಹಿತಿ
ಲಭಿಸಲಿದೆ.
ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ, ಪಿಎಸ್ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.