ಕರಾವಳಿತಾಜಾ ಸುದ್ದಿಗಳು

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಮಳೆಹಾನಿ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆ

ರಾಜ್ಯದಾದ್ಯಂತ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರಾಕೃತಿಕ ವಿಕೋಪದಿಂದ ಹಾನಿಯುಂಟಾಗಿದ್ದು, ಈ ಸಂಬಂಧ ಇಂದು ದಿನಾಂಕ 13-07-2022 ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದ ಉಂಟಾದ ಮನೆ ಹಾಗೂ ಬೆಳೆ ಹಾನಿ ಕುರಿತು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ  ಮಳೆಹಾನಿ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣೆಯ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ ಮನೆ, ಆಸ್ತಿ ಹಾಗೂ ಕೃಷಿ ಭೂಮಿಗಳ ಸಂಪೂರ್ಣ ವಿವರಗಳನ್ನು ಪಡೆದು ಸೂಕ್ತ ಪರಿಹಾರ ಒದಗಿಸಲು ಸಭೆಯಲ್ಲಿ ಚರ್ಚಿಸಿ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್. ಅಶೋಕ್, ಲೋಕೋಪಯೋಗಿ ಇಲಾಖೆಯ ಸಚಿವರಾದ ಸಿ.ಸಿ ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಹಾಗೂ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!