ಕರಾವಳಿ

ಬ್ರಹ್ಮಾವರ : ನೀರಿನ ಹೊಂಡಕ್ಕೆ ಬಿದ್ದು ಮಗು ಮೃತ್ಯು

ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ 4 ವರ್ಷದ ಮಗುವೊಂದು ಆಟವಾಡಲೆಂದು ತೆರಳಿದ್ದ ಸಮಯದಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಬ್ರಹ್ಮಾವರ ತಾಲೂಕು ಉಪ್ಪೂರು ತೆಂಕಬೆಟ್ಟುವಿನಲ್ಲಿ ಸಂಭವಿಸಿದೆ.

ಸಾವನ್ನಪ್ಪಿದ ಬಾಲಕ ಉಪ್ಪೂರು ನಿವಾಸಿ ನೋರ್ಮನ್ ಮತ್ತು ಸಿಲ್ವಿಯ ಎಂಬವರ ಪುತ್ರನಾಗಿರುವ ಲಾರೆನ್ ಲೂವಿಸ್ ಎಂದು ತಿಳಿಯಲಾಗಿದೆ.ಲಾರೆನ್ ಪೋಷಕರು ಕುವೈಟ್ ನಲ್ಲಿ ವಾಸವಾಗಿದ್ದು ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು ಎನ್ನಲಾಗಿದೆ.

ಮನೆಯ ಪಕ್ಕ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಪೋಷಕರು ಮತ್ತು ಕುಟುಂಬಿಕರು ಈ ಘಟನೆಯಿಂದ ದುಃಖದಲ್ಲಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!