ರಾಜ್ಯ

ಬೆಂಗಳೂರಿನಲ್ಲೊಂದು ಬರ್ಬರ ಕೊಲೆ : ಕಲ್ಲು ಎತ್ತಿಹಾಕಿ ಯುವಕನ ಹತ್ಯೆ

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಬಳಿಯ ಕೋನಸಂದ್ರದಲ್ಲಿ ಯುವಕನೋರ್ವನ ಬರ್ಬರ ಕೊಲೆಯಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆಗೈದು, ಕಲ್ಲು ಎತ್ತಿಹಾಕಿ ಯುವಕನ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ.

ಹೆ‌ಚ್.ಗೊಲ್ಲಹಳ್ಳಿಯ ನಿವಾಸಿ ಹೇಮಂತ್(27) ಬರ್ಬರ ಕೊಲೆಯಾದ ಯುವಕನಾಗಿದ್ದಾನೆ. ಹುಟ್ಟುಹಬ್ಬದ ದಿನವೇ ಹೇಮಂತ್​​ನನ್ನ ದುರುಳರು ಹತ್ಯೆಗೈದಿದ್ದಾರೆ.

ರಾತ್ರಿ ಸ್ನೇಹಿತನೊಂದಿಗೆ ಮನೆಯಿಂದ ಹೊರಹೋಗಿದ್ದ ಹೇಮಂತ್, ಪರಿಚಿತರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಈ ಕುರಿತಾಗಿ ತನಿಖೆ ಆರಂಭಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!