ಕರಾವಳಿ

ಸುರತ್ಕಲ್ ಫಾಝಿಲ್ ಹತ್ಯೆಗೆ ಬಳಸಿದ ಕಾರು ನಿರ್ಜನ ಪ್ರದೇಶದಲ್ಲಿ ಪತ್ತೆ

ಮಂಗಳೂರು : ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಕಾರು ಎನ್ನಲಾದ ಇಯೊನ್ ಕಾರು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕಡಕುಂಜದ ನಿರ್ಜನ ಪ್ರದೇಶದಲ್ಲಿ ಇಂದು ಪತ್ತೆಯಾಗಿದೆ.

ಪಡುಬಿದ್ರಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಬಂದ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸೈ ಪುರುಪೋತ್ತಮ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಆಗಮಿಸುವ ಹಿನ್ನಲೆಯಲ್ಲಿ ಸಾರ್ವಜನಿಕರು ಸ್ಪರ್ಶಿಸಬಾರದು ಎಂಬ ನಿಟ್ಟಿನಲ್ಲಿ ಪ್ಲಾಸ್ಟಿಕ್ ಹೊದಿಗೆ ಹಾಕಿದ್ದಾರೆ.

ಸ್ಥಳೀಯರು ಹೇಳುವಂತೆ ಮೂರು ನಾಲ್ಕು ದಿನಗಳಿಂದ ಈ ಕಾರು ಈ ಭಾಗದಲ್ಲಿ ಅನಾಥ ಸ್ಥಿತಿಯಲ್ಲಿದ್ದು, ನಾವು ಅಷ್ಟಾಗಿ ಗಮನಿಸಿಲ್ಲ. ಇವತ್ತು ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಿ ಅವರು ಬಂದಾಗ ಕೊಲೆಗೆ ಬಳಸಲಾದ ಕಾರು ಎಂಬುದು ನಮಗೆ ತಿಳಿದಿದೆ ಎಂದು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ಕಾರು ಎನ್ನಲಾದ ಇಯೊನ್ ಕಾರು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕಡಕುಂಜದ ನಿರ್ಜನ ಪ್ರದೇಶದಲ್ಲಿ ಇಂದು ಪತ್ತೆಯಾಗಿದೆ. ಪಡುಬಿದ್ರಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಬಂದ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸೈ ಪುರುಪೋತ್ತಮ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಆಗಮಿಸುವ ಹಿನ್ನಲೆಯಲ್ಲಿ ಸಾರ್ವಜನಿಕರು ಸ್ಪರ್ಶಿಸಬಾರದು ಎಂಬ ನಿಟ್ಟಿನಲ್ಲಿ ಪ್ಲಾಸ್ಟಿಕ್ ಹೊದಿಗೆ ಹಾಕಿದ್ದಾರೆ. ಸ್ಥಳೀಯರು ಹೇಳುವಂತೆ ಮೂರು ನಾಲ್ಕು ದಿನಗಳಿಂದ ಈ ಕಾರು ಈ ಭಾಗದಲ್ಲಿ ಅನಾಥ ಸ್ಥಿತಿಯಲ್ಲಿದ್ದು, ನಾವು ಅಷ್ಟಾಗಿ ಗಮನಿಸಿಲ್ಲ. ಇವತ್ತು ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಿ ಅವರು ಬಂದಾಗ ಕೊಲೆಗೆ ಬಳಸಲಾದ ಕಾರು ಎಂಬುದು ನಮಗೆ ತಿಳಿದಿದೆ ಎಂದು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!