ಕರಾವಳಿ

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ‌ ಪೂಜೆ

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಮಹಿಳಾ ಘಟಕದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ನಡೆಯಿತು.

ಸುಮಾರು 350ಕ್ಕೂ‌ ಮಿಕ್ಕಿ ಭಕ್ತಾದಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆಯನ್ನು ಸಲ್ಲಿಸಿ ಭಜನೆ, ಸಾಮೂಹಿಕ ಅಷ್ಟೋತ್ತರ‌ ಮತ್ತು ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡರು. ಮಹಾಪೂಜೆಯ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ,‌ ಪ್ರಧಾನ ಕಾರ್ಯದರ್ಶಿ ರಾಜೇಶ್, ಜತೆ ಕಾರ್ಯದರ್ಶಿ‌ ಮಹೇಂದ್ರ ಕೋಟ್ಯಾನ್,‌ ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಹ ಸಂಚಾಲಕಿಯರಾದ ಗೋಧಾವರಿ ಎಮ್. ಸುವರ್ಣ, ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ಜಯಂತಿ ಹರೀಶ್, ಜತೆ ಕಾರ್ಯದರ್ಶಿಗಳಾದ ಸವಿತಾ ಸಂತೋಷ್, ಪ್ರಭಾ ದಯಾನಂದ ಮತ್ತು ಸಂಘದ ಆಡಳಿತ ಸಮಿತಿ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಶಿವದಾಸ್ ಪಿ., ರಮೇಶ್ ಕೋಟ್ಯಾನ್, ಸತೀಶ್ ಪೂಜಾರಿ, ಗುರುರಾಜ್ ಪೂಜಾರಿ, ಶಿವಾಜಿ ಸನಿಲ್, ವಿನಯ್ ಕುಮಾರ್, ಶಶಿಕಾಂತ್‌, ನಿತಿನ್ ಕುಮಾರ್, ಮಹಿಳಾ ಘಟಕದ ಸಮಿತಿ ಸದಸ್ಯರು, ಸಂಘದ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!