ಕರಾವಳಿ

ಸಂಜಿತ್ ಎಂ ದೇವಾಡಿಗ ಅವರಿಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ ಪ್ರಶಸ್ತಿ

ಉಡುಪಿ: ಕಾರ್ಕಳ ತಾಲೂಕು ಅಜೆಕಾರು ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಡಮಾಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021 ಪ್ರಶಸ್ತಿಗೆ ಕುಂದಾಪುರದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಂ ದೇವಾಡಿಗ ಇವರು ಆಯ್ಕೆಯಾಗಿರುತ್ತಾರೆ.

ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ಸಂಜಿತ್ ಎಂ ದೇವಾಡಿಗ ಗಂಗೊಳ್ಳಿಯ ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಚಿತ್ರಕಲಾ ಶಿಕ್ಷಕ ಮಾಧವ ದೇವಾಡಿಗ ಮತ್ತು ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಉಪನ್ಯಾಸಕಿಯಾಗಿರುವ ಸಾವಿತ್ರಿ ದೇವಾಡಿಗ ಇವರ ಪುತ್ರ.

ನವೆಂಬರ್ 14 ರಂದು ಮಧ್ಯಾಹ್ನ ಅಜೆಕಾರಿನಲ್ಲಿ ಒಟ್ಟು 30 ಪ್ರತಿಭಾನ್ವಿತ ಮಕ್ಕಳಿಗೆ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಉಪಸ್ಥಿತಿಯಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುವುದು ಎಂದು ಸಂಚಾಲಕರಾದ ಡಾ.ಶೇಖರ ಅಜೆಕಾರು ಅವರು ತಿಳಿಸಿರುತ್ತಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!