ಕರಾವಳಿ

ಭಾರತ ತಂಡದ ಖೋ ಖೋ ಆಟಗಾರ ಕರ್ನಾಟಕ ರತ್ನ “ತೀರ್ಥಹಳ್ಳಿಯ ವಿನಯ್’ ಇನ್ನಿಲ್ಲ

ಶಿವಮೊಗ್ಗ: ತೀರ್ಥಹಳ್ಳಿಯ ಕ್ರೀಡಾ ಸಾಧಕ ಖೋ ಖೋ ಆಟಗಾರ ವಿನಯ್ (33) ಸಾವನ್ನಪ್ಪಿದ್ದಾರೆ..
ಮೆದುಳು ಜ್ವರದಿಂದ ಬಳಲುತ್ತಿದ್ದ ವಿನಯ್ ಮಣಿಪಾಲದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇವರು ಖೋ ಖೋ ಆಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು.

ವಿನಯ್, ಜಿಲ್ಲಾ ರಾಜ್ಯ ಹಾಗೂ ರಾಷ್ಟ್ರ
ಮಟ್ಟವನ್ನು ಖೋ ಖೋ ಕ್ರೀಡೆಯಲ್ಲಿ
ಪ್ರತಿನಿಧಿಸಿದ್ದರು. ವಿನಯ್ ಅವರ ಸಾಧನೆಗೆ
ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ
ಗೌರವಿಸಿತ್ತು.

ವಿನಯ್ ಕಳೆದ 7 ದಿನದಿಂದ ತೀವ್ರ ಜ್ವರದಿಂದ
ಬಳಲುತ್ತಿದ್ದರು. ಚಿಕಿತ್ಸೆಗೆಂದು ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!