ಕರಾವಳಿ

ಎಮ್.ಇ.ಐ.‌ ನೂತನ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿಯವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದ ಜಿಲ್ಲಾ ಪದಾಧಿಕಾರಿಗಳ ತಂಡದಿಂದ ಅಭಿನಂದನೆ

ಕರ್ನಾಟಕ ಸರಕಾರದ ಸ್ವಾಮ್ಯದ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ‌ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ತಂಡದಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್,‌‌ ಕಿಶೋರ್ ಕುಮಾರ್ ಕುಂದಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್ ಶೆಟ್ಟಿ,‌ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ,‌ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಸಹಕಾರಿ ಪ್ರಕೋಷ್ಠದ ಸಹ ಸಂಚಾಲಕ ಸಂತೋಷ್ ಜತ್ತನ್ ಹೇರೂರು, ಅಂಬಲಪಾಡಿ-ಕಡೆಕಾರು ಮಹಾ ಶಕ್ತಿ ಕೇಂದ್ರದ ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಉಡುಪಿ ನಗರಸಭಾ ಸದಸ್ಯ ಟಿ. ಜಿ. ಹೆಗ್ಡೆ, ಪ್ರಮುಖರಾದ ಮೆರ್ಡಿ ಸತೀಶ್ ಶೆಟ್ಟಿ ಕುಂದಾಪುರ ಹಾಗೂ ನ್ಯಾಯವಾದಿ ಉಮೇಶ್ ಶೆಟ್ಟಿ ಕಳತ್ತೂರು, ರಾಧಾಕೃಷ್ಣ ಶೆಟ್ಟಿ, ಜಗದೀಶ್ ಶೆಟ್ಟಿ ಹಾವಂಜೆ, ಪ್ರವೀಣ್ ಶೆಟ್ಟಿ ಕಿದಿಯೂರು, ಪ್ರಸನ್ನ ಶೆಟ್ಟಿ ಕಡೆಕಾರು, ಅಮರ್ ಶೆಟ್ಟಿ ಹಿರಿಯಡ್ಕ, ಪ್ರಶಾಂತ್ ಶೆಟ್ಟಿ ಅಂಜಾರು ಮುಂತಾದವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!