ಕರಾವಳಿ

ಆಗಸ್ಟ್ 15ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ತಿರಂಗಾ ಯಾತ್ರೆ

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಆಗಸ್ಟ್ 15ರಂದು ಬೆಳಿಗ್ಗೆ 8.30ಕ್ಕೆ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ.

ಬೆಳಿಗ್ಗೆ 11.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿ ಬಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ವರೆಗೆ ಬೃಹತ್ ತಿರಂಗಾ ಯಾತ್ರೆ’ ನಡೆಯಲಿದ್ದು, ಗಾಂಧಿ ಪ್ರತಿಮೆಗೆ ಹಾರಾರ್ಪಣೆಯೊಂದಿಗೆ ಸಮಾಪನಗೊಳ್ಳಲಿದೆ.

ಈ ತಿರಂಗಾ ಯಾತ್ರೆಯಲ್ಲಿ ಪಕ್ಷದ ಪ್ರಮುಖರು, ಬಿಜೆಪಿ
ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ
ಶಕ್ತಿಕೇಂದ್ರ, ಶಕ್ತಿಕೇಂದ್ರ, ಬೂತ್ ಸಮಿತಿಯ
ಪದಾಧಿಕಾರಿಗಳು, ಸಮಿತಿ ಸದಸ್ಯರು, ಎಲ್ಲಾ ಸ್ತರದ
ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಹಾಗೂ
ಪಕ್ಷದ ಹಿತೈಷಿಗಳು ಬಿಳಿ ಬಣ್ಣದ ಶುಭ್ರ ಉಡುಪು ಧರಿಸಿ
ಗರಿಷ್ಠ ಸಂಖ್ಯೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ತಿರಂಗಾ ಯಾತ್ರೆ’ಯನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!