75ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಚರಣೆ

ಶ್ರೀ ದುರ್ಗಾಪರಮೇಶ್ವರಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಅಗ್ರಹಾರ ಕಟಪಾಡಿ ಇದರ 75ನೇ ವರ್ಷದ ಸ್ವಾತಂತ್ರದ ಅಮೃತ ಮಹೋತ್ಸವದ ಪ್ರಯುಕ್ತ ಧ್ವಜಾರೋಹಣಕಾರ್ಯಕ್ರಮವು ಶಾಲಾ ವಠಾರದಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಅಗ್ರಹಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ರಾದ ಶ್ರೀ ವೈ ಭರತ್ ಹೆಗ್ಡೆ ಹಾಗೂ ಶಾಲಾ ಸಂಚಾಲಕರಾದ ರಂಜನ್ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು.
75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ಚಿತ್ರಕಲಾ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು
ಈ ಸಂಧರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸರೋಜಿನಿ, ತಾಲೂಕ್ ಪಂಚಾಯತ್ ಸದಸ್ಯರಾದ ನಾಗೇಶ್,ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕದ ಅಧ್ಯಕ್ಷರಾದ ದಿಲೀಪ್,ಕೋಶಾಧಿಕಾರಿ ಅರ್ಜುನ್,ಸದಸ್ಯರಾದ ಸಂತೋಷ್ ಪೂಜಾರಿ, ರಮೇಶ್, ಗಿರಿಧರ್ ,ಕರುಣಾಕರ್ ಶೆಟ್ಟಿ,ಸಂತೋಷ್.ಎನ್. ಎಸ್. ಕಟಪಾಡಿ,ದೀಪಕ್ ದುರ್ಗಾನಗರ, ಅಂಗನವಾಡಿ ಶಿಕ್ಷಕಿಯರಾದ ಶ್ರೀಮತಿ ಸುಮ,ಸಹಾಯಕಿಯರಾದ ಮೋಹಿನಿ ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸ್ವಾಗತ ಭಾಷಣ ವನ್ನು ಶಿಕ್ಷಕಿಯಾದ ಶ್ರೀಮತಿ ತಿಲಕ ನೆರವೇರಿಸಿದರೆ,ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.