ಕರಾವಳಿ

ಬನ್ನಂಜೆ ನಾರಾಯಣಗುರು ಆಡಿಟೋರಿಯಂ ಲೋಕಾರ್ಪಣೆ

ಬಿಲ್ಲವ ಸೇವಾ ಸಂಘ ಉಡುಪಿ (ರಿ.) ಇದರ ಬನ್ನಂಜೆಯ ನವೀಕೃತ “ನಾರಾಯಣಗುರು ಆಡಿಟೋರಿಯಂ” ಲೋಕಾರ್ಪಣೆ ಇಂದು ದಿನಾಂಕ 03-09-2022 ರಂದು ನೆರವೇರಿತು.

ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ನವೀಕೃತ “ನಾರಾಯಣಗುರು ಆಡಿಟೋರಿಯಂ” ಲೋಕಾರ್ಪಣೆಗೊಳಿಸಿ ಆಶೀರ್ವಚಿಸಿದರು.

ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ರಿ. ಮೂಲ್ಕಿ ಅಧ್ಯಕ್ಷರಾದ ರಾಜಶೇಖರ್ ಕೋಟ್ಯಾನ್, ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಅಧ್ಯಕ್ಷರಾದ ಬಿ.ಎನ್ ಶಂಕರ ಪೂಜಾರಿ, ಸ್ಥಳೀಯ ನಗರಸಭಾ ಸದಸ್ಯರಾದ ಸವಿತಾ ಹರೀಶ್ ರಾಮ್, ಬಿಲ್ಲವ ಸೇವಾ ಸಂಘ ಉಡುಪಿ ರಿ. ಬನಂಜೆ ಅಧ್ಯಕ್ಷರಾದ ಆನಂದ ಪೂಜಾರಿ ಕಿದಿಯೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!