ಕರಾವಳಿ
ಆನಂದ ಎನ್. ಪುತ್ರನ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ

ಉಡುಪಿ : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ ರವರ ತಂದೆ ಆನಂದ ಎನ್. ಪುತ್ರನ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಯಶ್ಪಾಲ್ ಎ. ಸುವರ್ಣ ಮತ್ತು ಅವರ ಕುಟುಂಬ ವರ್ಗ, ಬಂಧು-ಮಿತ್ರರು ಹಾಗೂ ಅಭಿಮಾನಿಗಳಿಗೆ ಹಿರಿಯರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.