ಬೆಳ್ತಂಗಡಿ :ಯುವಕನೋರ್ವ ನಾಪತ್ತೆ, ಲುಕ್ ಔಟ್ ನೊಟೀಸ್ ಹೊರಡಿಸಿದ ಪೊಲೀಸರು

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುವಕನೊರ್ವ ನಾಪತ್ತೆಯಾದ ಪ್ರಕರಣ ದಾಖಲಾಗಿದ್ದು, ಯುವಕನ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಧರ್ಮಸ್ಥಳ ಪೊಲೀಸರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಮಾಹಿತಿ ನೀಡಬೇಕಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಪ್ರಕಟಣೆ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ನೇರೊಳ್ ಪಲ್ಕೆ ಮನೆಯ ಮುರುಳಿಧರ್ ಎಂಬವವರ ಮಗ ಕೌಶಿಕ್.ಕೆ ಕಳೆದ ವಾರ ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದಾರೆ.
ಕೌಶಿಕ್ ಅವರು ಕೆ.ಪಿ.ಟಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಮನೆಯಿಂದ ಮಂಗಳೂರಿಗೆ ಕಾಲೇಜಿಗಾಗಿ ಹೋಗಿ ಬರುತ್ತಿದ್ದರು.
ನಾಪತ್ತೆಯಾದ ಮೇಲೆ ಮನೆಯವರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದಾರೆ. ಯಾವುದೇ ಸುಳಿವು ಸಿಕ್ಕಿಲ್ಲ ಆದರಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೌಶಿಕ್ ಅವರ ತಂದೆ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಲು ಲುಕ್ ಔಟ್ ನೋಟಿಸ್ ಪ್ರಕಟಣೆ ಹೊರಡಿಸಿದ್ದಾರೆ.