ರಾಜ್ಯ
ರಕ್ತಚಂದನ ದಿಮ್ಮಿ ಸಾಗಾಟ : ಆರೋಪಿಗಳು ವಶ
ಬೆಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ 1.5 ಟನ್ ರಕ್ತಚಂದನ ದಿಮ್ಮಿಯನ್ನು ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ವಶ ಪಡಿಸಲಾಗಿದೆ. ಬಂಧಿತ ಆರೋಪಿಗಳು ಸಿದ್ಧರಾಜು, ಪ್ರಜ್ವಲ್, ಲೋಕೇಶ್, ದೇವರಾಜ್, ಗೋವಿಂದ ಸ್ವಾಮಿ ಎಂದು ತಿಳಿದುಬಂದಿದೆ.
ಪೊಲೀಸರು ಆರೋಪಿಗಳನ್ನು ಮಹಾಲಕ್ಷ್ಮಿ ಲೇಔಟ್ ನಲ್ಲಿ ಬಂಧಿಸಿದ್ದಾರೆ. ಪೊಲೀಸರ ಕಣ್ತಪ್ಪಿಸಲು ಬೊಲೇರೋ ವಾಹನದಲ್ಲಿ ರಕ್ತಚಂದನ ದಿಮ್ಮಿಗಳ ಮೇಲೆ ಟೊಮೆಟೊ ಬಾಕ್ಸ್ ಹಾಕಿ ಸಾಗಾಟ ಮಾಡುತ್ತಿದ್ದರು.
ರಕ್ತಚಂದನ ಮರಗಳನ್ನು ಮಂಡ್ಯದ ದೇವಲಾಪುರ ಕಾಡಿನಿಂದ ಮರಗಳನ್ನ ಕಳ್ಳತನ ಮಾಡಿದ್ದ ಗ್ಯಾಂಗ್ ತಮಿಳುನಾಡು ಭಾಗಕ್ಕೆ ಸಾಗಿಸುವ ವೇಳೆ ಅರೆಸ್ಟ್ ಮಾಡಲಾಗಿದೆ.
ಆರೋಪಿಗಳ ಪೈಕಿ ಗೋವಿಂದ ಸ್ವಾಮಿ ಮೇಲೆ ಈ ಹಿಂದೆಯು ಆಂಧ್ರ ಪ್ರದೇಶ, ತಮಿಳುನಾಡು ಭಾಗದಲ್ಲಿ ಪ್ರಕರಣ ದಾಖಲಾಗಿವೆ.