ರಾಜ್ಯ

ಭಟ್ಕಳದಲ್ಲಿ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪೋಕ್ಸೋ ಕೇಸ್ ಆರೋಪಿ

ಭಟ್ಕಳ: 2014 ಪೋಕ್ಸೋ ಆರೋಪಿಯೋರ್ವ
ಮನೆಯ ಹಿಂಬದಿಯ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಾಲ್ಲೂಕಿನ ಹಡೀಲ್ ಸಬ್ಬತ್ತಿ ಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಾರಾಯಣ ಈರಪ್ಪ ನಾಯ್ಕ 64 ವರ್ಷ ಎಂದು ಗುರುತಿಸಲಾಗಿದೆ. ಈತನ
ಮೇಲೆ 2014 ರಲ್ಲಿ ಭಟ್ಕಳ ಗ್ರಾಮೀಣ ಠಾಣೆ ಯಲ್ಲಿ
ಪೋಸ್ಕೋ ಪ್ರಕರಣ ದಾಖಲಾಗಿದ್ದು.ಪ್ರಕರಣವು ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯ ವಿಚಾರಣೆ ನಡೆಯುತ್ತಿದ್ದು ಈ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ

ಈತ ಕಳೆದ 15 ದಿನದಿಂದ ತುಂಬಾ ಬೇಸರದಿಂದ ಇದ್ದವನು ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಹತ್ತಿರದಲ್ಲಿರುವ ಗೇರು ಪ್ಲಾಂಟೇಷನ್‌ನಲ್ಲಿ ಗೇರು ಮರಕ್ಕೆ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಭಟ್ಕಳ ಗ್ರಾಮೀಣ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!