ಕರಾವಳಿ

ಮಂಗಳೂರು: ಓವರ್‌ಟೇಕ್‌ ಮಾಡುವ ಭರದಲ್ಲಿ 12 ವರ್ಷದ ಬಾಲಕನ ಪ್ರಾಣ ತೆಗೆದ ಖಾಸಗಿ ಬಸ್‌

ಮಂಗಳೂರು: ಚಾಲಕನ ನಿರ್ಲಕ್ಷ್ಯದಿಂದ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು 12 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಲಾಲ್‌ಬಾಗ್ ಬಳಿ ನಡೆದಿದೆ.

ಮಂಗಳೂರು – ಕಿನ್ನಿಗೋಳಿ – ಕಟೀಲು –ನಡುವೆ ಸಂಚರಿಸುವ ಖಾಸಗಿ ಬಸ್ಸಿನ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಈ ದುರ್ಘಟನೆಗೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ನಗರದಲ್ಲಿ ಖಾಸಗೀ ಬಸ್ಸುಗಳ ಟೈಂ ಕೀಪಿಂಗ್ ಭರದಲ್ಲಿ ನಡೆಯುತ್ತಿರುವ ಅತಿವೇಗ ಮತ್ತು ಪೈಪೋಟಿಯಿಂದಲೇ ಇಂತಹ ಅಪಘಾತಗಳು ನಡೆಯುತ್ತಿವೆ ಎಂಬ ಆರೋಪಗಳು ನಗರದಲ್ಲಿ ನಿರಂತರವಾಗಿ ಕೇಳಿ ಬರುತ್ತಿವೆ.

ಸ್ಥಳಕ್ಕೆ ಮಂಗಳೂರು ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!