ಕರಾವಳಿ
ಮಣಿಪಾಲ: ಈಶ್ವರ ನಗರದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ..!

ಮಣಿಪಾಲ: ಮಾನಸಿಕ ಖಿನ್ನತೆಯಿಂದ ಮಣಿಪಾಲದ ಈಶ್ವರ ನಗರದಲ್ಲಿ ಸುಮತಿ ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಮತಿ (72) ಅವರು ಅನೇಕ ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಳುತ್ತಿದ್ದು, ಚಿಕಿತ್ಸೆಯನ್ನು ಪಡೆಯುತ್ತಿದ್ದರು, ಅವರ ಪತಿಯ ಮರಣದ ಬಳಿಕ ಬಳಿಕ ಸುಮತಿಯವರ ಮಾನಸಿಕ ಖಿನ್ನತೆ ಸಮಸ್ಯೆ ಉಲ್ಬಣಗೊಂಡಿದ್ದು, ಇದೇ ಕಾರಣದಿಂದ ಅವರು ಜು.17 ರಂದು ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಾಗರಾಜ ಕಟೀಲ್ ಶೆಟ್ಟಿಗಾರ್ ಅವರು ನೀಡಿದ ಮಾಹಿತಿಯಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.