ಕರಾವಳಿ

ಪಾದಚಾರಿಯ ಸಾವಿಗೆ ಕಾರಣನಾದ ಅಪಘಾತದ ಆರೋಪಿಗೆ ಕಾರಾಗೃಹ ಶಿಕ್ಷೆ

ಉಡುಪಿ: ಅತಿವೇಗ ಹಾಗೂ ಅಜಾಗರೂಕತೆಯಿಂದ ಲಾರಿ
ಚಲಾಯಿಸಿ ಪಾದಚಾರಿಗೆ ಡಿಕ್ಕಿ ಹೊಡೆಸಿ, ಸಾವಿಗೆ
ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ
ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2021 ಫೆಬ್ರವರಿ 28 ರಂದು ಸಂಜೆ 4.30 ರ ಸುಮಾರಿಗೆ
ಮಂಗಳೂರಿನ ಶಾಂತಿಗುಡ್ಡೆ ಮನೆ ನಿವಾಸಿ ಅಬೂಬಕ್ಕರ್
ಎಂಬಾತನು ಬ್ರಹ್ಮಾವರ ತಾಲೂಕು ಹಲುವಳ್ಳಿ ಗ್ರಾಮದ
ಹೆಬ್ರಿ-ಬ್ರಹ್ಮಾವರ ಮುಖ್ಯ ರಸ್ತೆಯ ಧಾರಣ-ಕಂಬಳ
ಎಂಬಲ್ಲಿ ಕಂಟೈನರ್ ಲಾರಿಯನ್ನು ಅತೀ ವೇಗ ಹಾಗೂ
ಅಜಾಗರೂಕತೆಯಿಂದ ರಸ್ತೆಯ ತೀರಾ ಎಡ ಬದಿಗೆ
ಚಲಾಯಿಸಿ, ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಕೃಷ್ಣ
ಪುತ್ರನ್ ಎಂಬ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಅವರ
ತೊಡೆ, ಕಾಲುಗಳಿಗೆ ಹಾಗೂ ತಲೆಗೆ ತೀವ್ರ ಸ್ವರೂಪದ
ಗಾಯವಾಗಿ ಮೃತಪಟ್ಟಿರುವ ಹಿನ್ನೆಲೆ, ಬ್ರಹ್ಮಾವರ ಠಾಣೆಯ
ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ
ಹಿನ್ನೆಲೆ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ
ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು
ಆರೋಪಿ ಅಬೂಬಕ್ಕರ್ ಎಂಬಾತನಿಗೆ 2 ವರ್ಷ 6
ತಿಂಗಳುಗಳ ಕಾರಾಗೃಹ ವಾಸ ಶಿಕ್ಷೆ ಹಾಗೂ 10000 ರೂ.
ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ. ಸರಕಾರದಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿರುತ್ತಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!