ಕರಾವಳಿ

ಮಣಿಪಾಲ: ನೇತಾಜಿ ನಗರದಲ್ಲಿ ವಿವಾಹಿತ ಮಹಿಳೆ ನೇಣು ಬೀಗಿದು ಆತ್ಮಹತ್ಯೆ

ಮಣಿಪಾಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ 80 ಬಡಗುಬೆಟ್ಟು ಗ್ರಾಮದ ನೇತಾಜಿ ನಗರದಲ್ಲಿ  ನಡೆದಿದೆ.

ನೇತಾಜಿ ನಗರದ ನಿವಾಸಿ ಜಯಲಕ್ಷ್ಮೀ (35) ನೇಣಿಗೆ ಶರಣಾದ ಮಹಿಳೆ. ಈಕೆ ಎರಡು ವರ್ಷದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಇದೇ ಕಾರಣದಿಂದ ಈ ಹಿಂದೆ ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ ನೆರೆ ಮನೆಯವರ ಸಹಾಯದಿಂದ ಬದುಕುಳಿದಿದ್ದಳು.

ಮನೆಯ ಹಾಲ್ ನಲ್ಲಿ ನೇಣಿಗೆ ಕೊರಳೊಡ್ಡಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!