ಕರಾವಳಿ

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಪುಣ್ಯತಿಥಿ ಆಚರಣೆ

ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದಿರಾ ಹಾಗೂ ಪಟೇಲ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್  ಅವರ ಪ್ರಾಯೋಜಕತ್ವದಲ್ಲಿ ಉಡುಪಿ ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಾಗೂ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿರುವ ತಾಯಂದಿರಿಗೆ ಹಾಗೂ ಮಕ್ಕಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ನಾಯಕರಾದ ಅಶೋಕ್ ಕುಮಾರ್ ಕೊಡವೂರು, ಗೀತಾ ವಾಗಲೇ ಎಂ. ಎ ಗಫೂರ್, ರಮೇಶ್ ಕಾಂಚನ್, ದಿನೇಶ್ ಪುತ್ರನ್, ಮುರಳಿ ಶೆಟ್ಟಿ, ನರಸಿಂಹಮೂರ್ತಿ, ಫಾ. ವಿಲಿಯಮ್ ಮಾರ್ಟಿಸ್, ವೆರೋನಿಕಾ ಕರ್ನೆಲೀಯೋ, ಮೀನಾಕ್ಷಿ ಮಾಧವ ಬನ್ನಂಜೆ, ಹರೀಶ್ ಕಿಣಿ, ಪುಷ್ಪಾ ಅಂಚನ್, ಜ್ಯೋತಿ ಹೆಬ್ಬಾರ್, ಅಮೃತ್ ಶೆಣೈ, ಕೀರ್ತಿ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಸುಕನ್ಯಾ ಪೂಜಾರಿ, ಚಂದ್ರಿಕಾ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಶಬರೀಶ್ ಸುವರ್ಣ, ಐರಿನ್ ಆಂದ್ರಾದೆ, ಜಯಕುಮಾರ್, ಗೋಪಿ ನಾಯ್ಕ ಪ್ರಮೀಳಾ ಸುವರ್ಣ, ಜಯಶ್ರೀ ಶೇಟ್, ಸುಮನಾ ಆಚಾರ್ಯ,ಉಪೇಂದ್ರ ಮೆಂಡನ್, ಉಪೇಂದ್ರ ಗಾಣಿಗ, ರಾಜೇಶ್ ನಾಯಕ್ , ಸಾಯಿರಾಜ್,ಗಣೇಶ್, ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.

ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಾದ ಡಾ.
ಮಧುಸೂದನ್ ನಾಯಕ್, ಡಾ. ವೀಣಾ ಕುಮಾರಿ ಹಾಗೂ
ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ
ವೈದ್ಯಾಧಿಕಾರಿಗಳಾದ ಡಾ. ರಾಜಗೋಪಾಲ್ ಭಂಡಾರಿ ಅವರು ಉಪಸ್ಥಿತರಿದ್ದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!