ಕರಾವಳಿ

ಕಾರ್ಕಳ:ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು

ಕಾರ್ಕಳ: ವ್ಯಕ್ತಿಯೊಬ್ಬರು ಗುಜರಿ ಆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ನ. 1ರ ಮಂಗಳವಾರದಂದು ಬೆಳಿಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಮಕೃಷ್ಣ ನಾಯ್ಕ ಎಂದು ಗುರುತಿಸಲಾಗಿದೆ.

ನ. 1ರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಎಂದಿನಂತೆ ರಸ್ತೆ ಬದಿಯ ಗುಜುರಿ ಹೆಕ್ಕಲು ಹೋಗಿದ್ದರು. ಬಳಿಕ ಮಗ ದಿನೇಶ್ ನಾಯ್ಕ ಅವರಿಗೆ ಅವರ ಪರಿಚಯದ ವ್ಯಕ್ತಿಯೊಬ್ಬರು ದೂರವಾಣಿ ಕರೆ ಮಾಡಿ ತಂದೆ ರಾಮಕೃಷ್ಣ ನಾಯ್ಕ ಅವರು ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಎಂಬಲ್ಲಿ ಸುರೇಶ ಎಂಬವರ ಹೂವಿನ ಅಂಗಡಿಯ ಹತ್ತಿರ ರಸ್ತೆಯ ಬೀದಿಯಲ್ಲಿ ಗುಜರಿ ಹೆಕ್ಕುತ್ತಿದ್ದ ಪ್ಲಾಸ್ಟಿಕ್ ಗೋಣಿ ಚೀಲದ ಮೇಲೆ ಬಿದ್ದಿದ್ದಾರೆ ಎಂದು ಹೇಳಿದ್ದಾರೆ.

ತಕ್ಷಣ ಸ್ಥಳಕ್ಕೆ ಹೋದ ದಿನೇಶ್ ನಾಯ್ಕ ಅವರಿಗೆ ವಿದ್ಯುತ್ ತಂತಿ ತುಂಡಾಗಿ ನೆಲಮಟ್ಟದವರೆಗೆ ನೇತಾಡುತ್ತಿರುವುದು ಕಂಡುಬಂದಿದ್ದು, ವಿದ್ಯುತ್ ವಯರನ್ನು ಆಕಸ್ಮಿಕವಾಗಿ ಮುಟ್ಟಿದ ಪರಿಣಾಮ ವಿದ್ಯುತ್ ಶಾಕ್‌ ತಗುಲಿದೆ ಎಂದು ತಕ್ಷಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ರಾಮಕೃಷ್ಣ ನಾಯ್ಕ್ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!