ಕರಾವಳಿ
ತೀವ್ರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ
ಪಡುಬಿದ್ರಿ: ನ. 1ರ ಮಂಗಳವಾರದಂದು ಮುಂಜಾನೆ ಶಿಕ್ಷಕಿಯೊಬ್ಬರು ಹೆಜಮಾಡಿ ಟೋಲ್ ಗೇಟ್ ಬಳಿ ಇರುವ ತನ್ನ ಮನೆಯ ಹೊರಗಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಜಯಂತಿ ಎಸ್ ಗಡಿಯಾರ್ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕಳೆದ 26 ವರ್ಷಗಳಿಂದ ಇವರು ಎಸ್ ಕೋಡಿಯ ತಪೋವನ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ತೀವ್ರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಆಕೆ ಖಿನ್ನತೆಗೆ ಬೆಳ್ಮಣ್ ಮತ್ತು ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗಿತ್ತು.ಜಯಂತಿ ಗಡಿಯಾರ್ ಅವರ ಶಾಲೆಯ ಅತ್ಯುತ್ತಮ ಶಿಕ್ಷಕರಲ್ಲಿ ಒಬ್ಬರು ಎಂದು ಪರಿಗಣಿಸಲ್ಪಟ್ಟಿದ್ದರು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.