ರಾಜ್ಯ

ಬೈಕ್ ಅಪಘಾತ :ಕುಸಿದು ಬಿದ್ದು ಬಾಲಕ ಸಾವು

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಬೈಕ್ ಅಪಘಾತವಾದಾಗ ಭಯಪಟ್ಟ 9ನೇ ತರಗತಿ ಬಾಲಕ‌ ಕುಸಿದು‌ ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ಭಟ್ಕಳದಲ್ಲಿ ಸಂಭವಿಸಿದೆ. ಸಾವನ್ನಪ್ಪಿದ ಬಾಲಕ ಅಬ್ದುಲ್ಲಾ(14) ಎಂದು ತಿಳಿದು ಬಂದಿದೆ.

ಈತ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ನಿನ್ನೆ ರಾತ್ರಿ ಬಾಲಕ ಅಬ್ದುಲ್ಲಾ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಇನ್ನೊಂದು ಬೈಕ್ ಈತನ ಬೈಕ್ ಗೆ ಡಿಕ್ಕಿಯಾಗಿದೆ. ಈ ವೇಳೆ ಬಾಲಕ ಅಬ್ದುಲ್ಲಾ ಬೈಕ್‌ ಸಮೇತ ಬಿದ್ದಿದ್ದ ಎನ್ನಲಾಗಿದೆ.

ಬೈಕನ್ನು ಎತ್ತಿ ನಿಲ್ಲಿಸುವ ವೇಳೆ ಜನರು ಜಮಾಯಿಸಿದ್ದಾರೆ. ಇದರಿಂದ ಭಯಪಟ್ಟ ಅಬ್ದುಲ್ಲಾ ಅಲ್ಲಿಯೆ ಕುಸಿದ್ದು ಬಿದ್ದಿದ್ದಾನೆ. ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಈ ವೇಳೆ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ.

ಈ ಸ್ಥಳಕ್ಕೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ‌.ಪೊಲೀಸರು ಈ ಪ್ರಕರಣದ ಕುರಿತು ಹೆಚ್ಚಿನ‌ ತನಿಖೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!