ಕರಾವಳಿ

ಕಾಪು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಉಡುಪಿ: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಲ್ಲಾರು ಗ್ರಾಮದ ಕುಡ್ತಿಮಾರು ಉರ್ದು ಶಾಲೆಯ ಬಳಿ ಇಂದು ಮುಂಜಾನೆ ನಡೆದಿದೆ.

ಮೃತರನ್ನು ಮಲ್ಲಾರು – ಫಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಹತ್ತಿರದ ನಿವಾಸಿ ಅಬ್ದುಲ್ ರಜಾಕ್ (48) ಎಂದು ಗುರುತಿಸಲಾಗಿದೆ. ರಜಾಕ್ ಇಂದು ಬೆಳಿಗ್ಗೆ 6.30ರಿಂದ 8 ಗಂಟೆಯ ‌ನಡುವೆ ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ಯಾವುದೋ ರೈಲು ಡಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರ ಗಾಯಗೊಂಡ ರಜಾಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆಪತ್ಬಾಂಧವ ಸೂರಿ ಶೆಟ್ಟಿ ಅವರ ಸಹಕಾರದೊಂದಿಗೆ ಮೃತದೇಹವನ್ನು ತೆರವುಗೊಳಿಸಲಾಯಿತು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!