ರಾಜ್ಯ

ಹಾಲು,ಮೊಸರು ದರ ಏರಿಕೆ ಆದೇಶಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತಡೆ

ಬೆಂಗಳೂರು: ಹಾಲು, ಮೊಸರು ದರ ಏರಿಕೆ ಆದೇಶವನ್ನು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ಹಿಡಿದಿದ್ದಾರೆ.

ಹಾಲು ಮತ್ತು ಮೊಸರಿನ ದರವನ್ನು  3 ರೂಗೆ ಏರಿಕೆ ಮಾಡಿದ್ದ ಕೆಎಂಎಫ್ ಆದೇಶವನ್ನು ಬೊಮ್ಮಾಯಿ ತಡೆ ಹಿಡಿದಿದ್ದಾರೆ.

ಬೆಲೆ ಏರಿಕೆ ಬಗ್ಗೆ ನ.20ರಂದು ನಡೆಯುವ ಸಭೆ ಬಳಿಕ ನಿರ್ಧಾರ ಮಾಡಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.

ಹಾಲು, ಮೊಸರು ಎರಡೂ ಉತ್ಪನ್ನಗಳ ದರ ಹೆಚ್ಚಿಸಿ
ಸೋಮವಾರ ಬೆಳಗ್ಗೆ ಆದೇಶಿಸಿದ್ದರು. ಸೋಮವಾರ ಮಧ್ಯ ರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದೂ ಆದೇಶದಲ್ಲಿ ಉಲ್ಲೇಖಿಸಲಾಗಿತ್ತು.

Related Articles

Leave a Reply

Your email address will not be published. Required fields are marked *

Back to top button
error: Content is protected !!