ಕರಾವಳಿ

ಅಂಬಾಗಿಲು-ಕಲ್ಸಂಕ ಮಾರ್ಗವಾಗಿ ಬಸ್‌ಗಳು ಸಂಚರಿಸಲು ಸೂಚನೆ

ಉಡುಪಿ ಜಿಲ್ಲಾಧಿಕಾರಿಗಳ ಅಧಿಸೂಚನೆಯಂತೆ
ಸಂತಕಟ್ಟೆಯಿಂದ ಉಡುಪಿ ಕಡೆಗೆ ತೆರಳುವ ಕೆಲವೊಂದು ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು-ರಾ.ಹ. 17 ಎಂದು
ನಮೂದಿಸಿರುವ ಬಸ್ಸುಗಳು ಅಂಬಾಗಿಲು ರಾ.ಹೆ 66 ಕರಾವಳಿ ಬೈಪಾಸಿನಿಂದ ಅಂಬಲಪಾಡಿ ಬೈಪಾಸ್-ಬ್ರಹ್ಮಗಿರಿ-ಅಜ್ಜರಕಾಡು- ತಾಲೂಕು ಕಚೇರಿ ಮೂಲಕ ಹಾಗೂ ಉಳಿದ ಸಿಟಿ ಬಸ್ಸುಗಳು ಅಂಬಾಗಿಲು ತಾಂಗದಗಡಿ ಗುಂಡಿಬೈಲು ಮೂಲಕ ಕಲ್ಸಂಕ
ಬಂದು ಬೃಂದಾವನ ಹೋಟೆಲ್ ಬಳಿ ಎಡಕ್ಕೆ ತಿರುಗಿ ಖಾಫಿಯ ಹೋಟೆಲ್ ಬಳಿ ಬಲಕ್ಕೆ ತಿರುಗಿ ಸಿಟಿ ಬಸ್ಸು ನಿಲ್ದಾಣಕ್ಕೆ ಹಾಗೂ ಬಾರ್ಕೂರು ಬ್ರಹ್ಮಾವರ-ಹೊನ್ನಾಳ-ಹೆಬ್ರಿ-ಪೆರ್ಡೂರು-ಕುಕ್ಕೆಹಳ್ಳಿ ಹಾಗೂ ಇತರೆ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು ಗುಂಡಿಬೈಲು ಮೂಲಕ ಕಲ್ಸಂಕ ಬಂದು ಉಡುಪಿ
ಬಸ್ಸು ನಿಲ್ದಾಣ ಪ್ರವೇಶಿಸಬೇಕಾಗಿರುತ್ತದೆ.

ಆದರೆ ಅಂಬಾಗಿಲು-ಕಲ್ಸಂಕ ಮಾರ್ಗದಲ್ಲಿ ಬಸ್ಸುಗಳು
ಸಂಚರಿಸದಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿರುವ ಹಿನ್ನೆಲೆ ಮೇಲೆ ತಿಳಿಸಲಾದ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಅಂಬಾಗಿಲುಗುಂಡಿಬೈಲು ಕಲ್ಪಂಕ ಮಾರ್ಗವಾಗಿ ಉಡುಪಿ ಬಸ್ಸು ನಿಲ್ದಾಣ ತಲುಪುವಂತೆ ಎಲ್ಲಾ ಬಸ್ ಮಾಲೀಕರಿಗೆ ಸೂಚಿಸಲಾಗಿದ್ದು, ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!