ಕರಾವಳಿ

ಮಂಗಳೂರು : ಕೋಳಿ ಮಾಂಸ ಮಾರಾಟದ ಅಂಗಡಿಯ ಸಿಬ್ಬಂದಿಯ ಮೇಲೆ ಹಲ್ಲೆ : ಇಬ್ಬರು ರೌಡಿಶೀಟರ್ ಗಳ ಬಂಧನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ವೆಲೆನ್ಶಿಯಾ ಜಂಕ್ಷನ್ ನಲ್ಲಿ ಕೋಳಿ ಮಾಂಸ ಮಾರಾಟದ ಅಂಗಡಿಯ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ರೌಡಿಶೀಟರ್ ಗಳನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ ಘಟನೆ ರವಿವಾರ ನಡೆದಿದೆ.

ಪೊಲೀಸರಿಂದ ಬಂಧನವಾದ ಆರೋಪಿಗಳು ರೌಡಿ ಶೀಟರ್ ಗಳಾದ ಮಂಗಳೂರು ಜಲ್ಲಿಗುಡ್ಡೆ ಬಜಾಲ್ ನಿವಾಸಿ ಪ್ರೀತಮ್ ಪೂಜಾರಿ (27) ಮತ್ತು ಎಕ್ಕೂರು ನಿವಾಸಿ ಧೀರು ಯಾನೆ ಧೀರಜ್ ಕುಮಾರ್ ( 25 ) ಎಂದು ತಿಳಿದು ಗುರುತಿಸಲಾಗಿದೆ.

ಏಪ್ರಿಲ್ 10ರಂದು ಸಂಜೆ 6.30ರ ಸಮಯಕ್ಕೆ ಮಂಗಳೂರು ವೆಲೆನ್ಶಿಯಾ ಜಂಕ್ಷನ್ ಬಳಿಯ ಐಡಿಯಲ್ ಚಿಕನ್ ಅಂಗಡಿಯ ಮುಂಭಾಗದಲ್ಲಿ ಆರೋಪಿಗಳಿಬ್ಬರು ಸಾರ್ವಜನಿಕನೊಬ್ಬನಿಗೆ ಹಲ್ಲೆ ನಡೆಸುತ್ತಿದ್ದರು. ಇದನ್ನು ಅಂಗಡಿ ಸಿಬ್ಬಂದಿಗಳು ಪ್ರಶ್ನಿಸಿದಾಗ ಆರೋಪಿಗಳು ಅಂಗಡಿ ಸಿಬ್ಬಂದಿಗಳಾದ ಸುನಿಲ್ ಮಾರ್ಡಿ, ಅನಂತ ಮತ್ತು ಜೀವನ್ ಎಂಬವರಿಗೆ ಹೆಲ್ಮೆಟ್, ಕಲ್ಲುಗಳಿಂದ ಹೊಡೆದು ಗಾಯಗೊಳಿಸಿದ್ದಾರೆ. ನಂತರ ಸಿಬ್ಬಂದಿಗೆ ಚೂರಿಯಿಂದ ಇರಿಯಲು ಹೋದಾಗ ಸ್ಥಳದಲ್ಲಿದ್ದ ಸಾರ್ವಜನಿಕರು ತಡೆದಿದ್ದಾರೆ. ಆರೋಪಿಗಳು ಸಾರ್ವಜನಿಕರಿಗೂ ಚೂರಿ ತೋರಿಸಿ ತಿವಿಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಈ ಆರೋಪಿಗಳು ಸಾರ್ವಜನಿಕರೊಂದಿಗೆ ಜಗಳ ನಡೆಸಿ ಬಿದ್ದು ಗಾಯಗೊಂಡಿದ್ದಾರೆ. ಈ ಸಮಯದಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ಪೊಲೀಸರು ಬಂಧಿತ ಆರೋಪಿಗಳ‌ ವಿಚಾರಣೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!