ಕರಾವಳಿ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗ್ರಾಹಕ ಸ್ನೇಹಿ ಸೇವೆ ಶ್ಲಾಘನೀಯ: ನಾಡೋಜ ಡಾ. ಜಿ.ಶಂಕರ್

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ 2022ನೇ ಸಾಲಿನ ಡೈರಿಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಯಶ್‌ಪಾಲ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಗ್ರಾಹಕ ಸ್ನೇಹಿ ಸೇವೆಯ ಮೂಲಕ ಕರಾವಳಿ ಕರ್ನಾಟಕದ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್, ರಾಜ್ಯದಲ್ಲಿರುವ 70 ಲಕ್ಷ ಮೀನುಗಾರ ಸಮುದಾಯಕ್ಕೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಶಾಖೆಗಳನ್ನು ವಿಸ್ತರಿಸುವ ಮೂಲಕ ಗ್ರಾಹಕರಿಗೆ ಉತ್ತಮ ಸೇವೆ ನೀಡುವಂತಾಗಲಿ ಎಂದು ಶುಭ ಹಾರೈಸಿದರು.

ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಗೆ ಬ್ಯಾಂಕಿನ ವತಿಯಿಂದ ಮಂಜೂರಾದ 30 ಲಕ್ಷ ದೇಣಿಗೆಯ ದ್ವಿತೀಯ ಹಂತದ 5 ಲಕ್ಷದ ಚೆಕ್ಕನ್ನು ನಾಡೋಜ ಡಾ ಜಿ. ಶಂಕರ್ ರವರಿಗೆ ಹಸ್ತಾಂತರಿಸಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ಮಾತನಾಡಿ ಗ್ರಾಹಕರ ಮತ್ತು ಸದಸ್ಯರ ಸಹಕಾರದಿಂದ ಬ್ಯಾಂಕ್ ಉತ್ತಮ ಪ್ರಗತಿಯನ್ನು ಸಾಧಿಸಿದ್ದು, ಈಗಾಗಲೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳನ್ನು ಹೊಂದಿರುವ ಮಹಾಲಕ್ಷ್ಮೀ ಬ್ಯಾಂಕ್ ಶೀಘ್ರದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕುಮಟ ಮತ್ತು ಕಾರವಾರ ತಾಲೂಕಿಗೂ ಶಾಖೆಗಳ ಆರಂಭಿಸಲು ಆಡಳಿತ ಮಂಡಳಿ ಕಾರ್ಯಪ್ರವೃತ್ತರಾಗಿರುವುದಾಗಿ ತಿಳಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಮತ್ತು ಬ್ಯಾಂಕಿನ ಲೆಕ್ಕಪರಿಶೋಧಕರಾದ ಸಿ. ಎ. ಗಣೇಶ್ ಬಿ. ಕಾಂಚನ್ ಬ್ಯಾಂಕಿನ ಕಾರ್ಯಚಟುವಟಿಕೆಯ ಬಗ್ಗೆ ಶ್ಲಾಘಿಸಿದರು.

ನಿರ್ದೇಶಕರಾದ ವೆಂಕಟರಮಣ ಕಿದಿಯೂರು, ವಾಸುದೇವ ಸಾಲ್ಯಾನ್, ಶಶಿಕಾಂತ ಬಿ ಕೋಟ್ಯಾನ್, ಹೇಮನಾಥ ಜೆ ಪುತ್ರನ್, ಶೋಭೇಂದ್ರ ಸಸಿಹಿತ್ಲು, ಕೆ ಸಂಜೀವ ಶ್ರೀಯಾನ್, ರಾಮ ನಾಯ್ಕ್ ಎಚ್, ವಿನಯ ಕರ್ಕೇರ, ನಾರಾಯಣ ಟಿ ಅಮೀನ್, ಸುರೇಶ್ ಬಿ ಕರ್ಕೇರ, ಬಿ ಬಿ ಕಾಂಚನ್, ಶಿವರಾಮ ಕುಂದರ್, ವನಜಾ ಹೆಚ್ ಕಿದಿಯೂರು, ವನಜಾ ಜೆ ಪುತ್ರನ್, ವೃತ್ತಿಪರ ನಿರ್ದೇಶಕರಾದ ಮಂಜುನಾಥ ಎಸ್ ಕೆ, ಬ್ಯಾಂಕಿಂಗ್ ಸಲಹೆಗಾರರಾದ ಆನಂದ ಎನ್ ಪುತ್ರನ್ ಹಾಗೂ್ ಪ್ರಧಾನ ವ್ಯವಸ್ಥಾಪಕರಾದ ಜಿ ಕೆ ಶೀನಾ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!