ಕರಾವಳಿ
ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ

ಶ್ರೀ ವಿಠೋಬ ಭಜನಾ ಮಂದಿರ ಬಿಲ್ಲವ ಸೇವಾ ಸಂಘ (ರಿ.), ಅಂಬಲಪಾಡಿ ಇದರ ವಾರ್ಷಿಕ ಭಜನಾ ಸಪ್ತಾಹಕ್ಕೆ ಸಂಘದ ನಿಕಟಪೂರ್ವ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಆಡಳಿತ ಸಮಿತಿಯ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ರಮೇಶ್ ಕೋಟ್ಯಾನ್, ವಿನಯ್ ಕುಮಾರ್, ಭಜನಾ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಸಂಘದ ಸದಸ್ಯರಾದ ಕುಶಲ್ ಕುಮಾರ್ ಎ., ಜನಾರ್ದನ ಪೂಜಾರಿ, ವಿಘ್ನೇಶ್, ರಾಜು ಪೂಜಾರಿ, ಹರೀಶ್ ಪೂಜಾರಿ, ಮಹಿಳಾ ಘಟಕದ ಪದಾಧಿಕಾರಿಗಳಾದ ಪ್ರಭಾ ದಯಾನಂದ್, ಅಶ್ವಿನಿ ಪೂಜಾರಿ, ಅರ್ಚಕರಾದ ಜೀವನ್, ಅದಿತ್ ಮತ್ತಿತರರು ಉಪಸ್ಥಿತರಿದ್ದರು.