ಕರಾವಳಿ

ಮಣಿಪಾಲ ಮಣ್ಣಪಳ್ಳದಲ್ಲಿ ಬಾಗಲಕೋಟೆ ಮೂಲದ ಯುವಕನ ಅನುಮಾನಾಸ್ಪದ ಸಾವು

ಮಣಿಪಾಲ: ಇಲ್ಲಿನ ಮಣ್ಣಪಳ್ಳದಲ್ಲಿ ಬಾಗಲಕೋಟೆ ಮೂಲದ ಯುವಕನೊಬ್ಬನ ಮೃತದೇಹವು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ.

ಮೃತರನ್ನು ಬಾಗಲಕೋಟೆ ಮೂಲದ, ಮಣಿಪಾಲ ಶಾಂತಿನಗರದ ನಿವಾಸಿ ಮುಹಮ್ಮದ್ ಇಸ್ಮಾಯೀಲ್(30) ಎಂದು ಗುರುತಿಸಲಾಗಿದೆ. ಕಾರ್ಮಿಕರಾಗಿರುವ ಇವರನ್ನು ಫೆ.21ರಂದು ಮಧ್ಯಾಹ್ನದ ಬಳಿಕ ನಾಪತ್ತೆಯಾಗಿದ್ದ ಇವರ ಮೃತದೇಹ ಮಣ್ಣಪಳ್ಳದಲ್ಲಿ ಪತ್ತೆಯಾಗಿದೆ.

ಸಾವಿನ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಸ್ಥಳಕ್ಕೆ ಆಗಮಿಸಿ ಪರೀಶಿಲನೆ ನಡೆಸಿದ್ದಾರೆ. ಮೃತದೇಹವನ್ನು ಮಣಿಪಾಲ ಶವಗಾರಕ್ಕೆ ವರ್ಗಾಯಿಸಲಾಗಿದ್ದು, ಮರಣೋತ್ತರ ಪರೀಕ್ಷೆಯಿಂದ ಎಲ್ಲವೂ ಸ್ಪಷ್ಟವಾಗಲಿದೆ. ಮೃತದೇಹದಲ್ಲಿ ಯಾವುದೇ ಗಾಯಗಳು ಕಂಡುಬಂದಿಲ್ಲ ಎಂದು ಮಣಿಪಾಲ ಪೊಲೀಸರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!