
ಮೈಸೂರು, ಜುಲೈ 16: ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸರಳ ಆಚರಣೆ ಮಾಡಲಾಯಿತು.
ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ, ಪುನಸ್ಕಾರ, ರುದ್ರಾಭಿಷೇಕ, ಕುಂಕುಮಾಭಿಷೇಕ ಮಾಡಿ ವಿಶೇಷ ಅಲಂಕಾರ ಮಾಡಲಾಗಿದೆ. ಪ್ರತಿ ವರ್ಷವೂ ಆಷಾಢ ಶುಕ್ರವಾರಗಳಂದು ಸಹಸ್ರಾರು ಜನ ಸೇರುತ್ತಿದ್ದರು. ಆದರೆ ಕೊರೊನಾ ಹರಡುವಿಕೆ ತಡೆಗಟ್ಟಲು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.